ಬೆಂಗಳೂರು: 5,8,9 ಮತ್ತು 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಪಬ್ಲಿಕ್ ಪರೀಕ್ಷೆಗೆ ಸಂಬಂಧಿಸಿ ಬಿಗ್ ಅಪ್ಡೇಟ್ ಬಂದಿದೆ. ರಾಜ್ಯ ಹೈಕೋರ್ಟ್ನ ಏಕಸದಸ್ಯ ಪೀಠವು ಪಬ್ಲಿಕ್ ಪರೀಕ್ಷೆಗೆ ವಿಧಿಸಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ನ ವಿಭಾಗೀಯ ಪೀಠ ತೆರವುಗೊಳಿಸಿದೆ. ಹೀಗಾಗಿ ಮಾರ್ಚ್ 11ರ ಸೋಮವಾರದಿಂದ ಆರಂಭವಾಗಬೇಕಾಗಿದ್ದ ಬೋರ್ಡ್ ಎಕ್ಸಾಂಗಳು ಎಂದಿನಂತೆ ನಡೆಯಲಿವೆ.
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಬೋರ್ಡ್ ಎಕ್ಸಾಂ ಸುತ್ತೋಲೆಯನ್ನು ಕಳೆದ ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆಗಳು ಮೇಲ್ಮನವಿ ಸಲ್ಲಿಸಿದ್ದವು. ಇದೀಗ ವಿಭಾಗೀಯರ ಪೀಠವು ರದ್ದು ಆದೇಶಕ್ಕೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಪರೀಕ್ಷೆಗಳು ಪಬ್ಲಿಕ್ ಎಕ್ಸಾಂ ಮಾದರಿಯಲ್ಲೇ ಯಥಾವತ್ತಾಗಿ ನಡೆಯಲಿದೆ.
ಮೇಲ್ಮನವಿಯಲ್ಲಿ ಸರ್ಕಾರದ ವಾದ ಏನಾಗಿತ್ತು?
ಹೈಕೋರ್ಟ್ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಸರ್ಕಾರ ಸಲ್ಲಿಸಿದ ಮೇಲ್ಮನವಿಯಲ್ಲಿ, 53,680 ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಖಾಸಗಿ ಶಾಲೆಗಳಷ್ಟೇ ಬೋರ್ಡ್ ಪರೀಕ್ಷೆಗೆ ತಕರಾರು ಎತ್ತಿವೆ. ಸ್ವಹಿತಾಸಕ್ತಿಗಾಗಿ ಖಾಸಗಿ ಶಾಲೆಗಳು ರಿಟ್ ಸಲ್ಲಿಸಿವೆ. ಪೋಷಕರಾಗಲೀ, ಮಕ್ಕಳಾಗಲೀ ಬೋರ್ಡ್ ಪರೀಕ್ಷೆಗೆ ಆಕ್ಷೇಪಿಸಿಲ್ಲ. ಬೋರ್ಡ್ ಪರೀಕ್ಷೆಯಿಂದ ಖಾಸಗಿ ಶಾಲೆಗಳ ಮೌಲ್ಯಮಾಪನವಾಗಲಿದೆ ಎಂದು ತಿಳಿಸಿತ್ತು.
ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿಕ್ರಮ್ ಹುಯಿಲಗೋಳ್ ಅವರು ವಾದಿಸಿದರು. ಸರ್ಕಾರದ ಮನವಿಗೆ ಖಾಸಗಿ ಶಾಲೆಗಳ ಸಂಘವೂ ಆಕ್ಷೇಪ ವ್ಯಕ್ತಪಡಿಸಿತು. ಅಂತಿಮವಾಗಿ ಕೋರ್ಟ್ ಪಬ್ಲಿಕ್ ಪರೀಕ್ಷೆಗೆ ಅವಕಾಶ ಒದಗಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ