ರಾಷ್ಟ್ರದಲ್ಲಿ ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ಭಾವನೆಗಳ ಮೂಲಕ ಅಧಿಕಾರವನ್ನು ಪಡೆಯುವ ತಂತ್ರದ ಮುಂದುವರಿದ ಕ್ರಮವಾಗಿದೆ ಸಿಎಎ ಜಾರಿಗೊಳಿಸುವ ಆದೇಶ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಅಭಿಪ್ರಾಯ ಪಟ್ಟಿದೆ.
ಸಿಎಎ ಜಾರಿಯ ಮೂಲಕ ಸರ್ಕಾರ ಈಗ ಎದುರಿಸುತ್ತಿರುವ ಬಿಕ್ಕಟ್ಟು ಹಾಗೂ ಅವಮಾನದ ಸಂಗತಿಗಳಿಂದ ಪ್ರಜೆಗಳ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವಾಗಿದೆ.
ಇದರ ಜಾರಿಯಿಂದ ಭಾರತವು, ಪ್ರಜಾಪ್ರಭುತ್ವ, ಜಾತ್ಯಾತೀತ ವ್ಯವಸ್ಥೆ ಹೊಂದಿರುವ ವಿಶ್ವದ ಅತೀ ದೊಡ್ಡ ರಾಷ್ಟ್ರವಾಗಿರುವುದರಿಂದ ವಿಶ್ವದ ಇತರ ರಾಷ್ಟ್ರಗಳ ನಡುವೆ ತಲೆ ತಗ್ಗಿಸುವ ಮಟ್ಟಕ್ಕೆ ಇಳಿಯ ಬೇಕಾಗುತ್ತದೆ.
ಸರಕಾರವು ತನ್ನ ಅಧಿಕಾರದ ಸರಣಿಯನ್ನು ಮುಂದುವರಿಸುವ ಸಲುವಾಗಿ ಚುನಾವಣೆಯ ಹೊಸ್ತಿಲಲ್ಲಿ ತರಾತುರಿಯಲ್ಲಿ ಸಿಎಎ ಜಾರಿಗೊಳಿಸುವ ಪ್ರಯತ್ನಪಡುತ್ತಿದ್ದು, ಇದು ಅಪಾಯಕಾರಿ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ಅಧ್ಯಕ್ಷರಾದ ಮೌಲಾನ ಮುಹಮ್ಮದ್ ಫಾಝಿಲ್ ರಝ್ವಿ ಮತ್ತು ಪ್ರಧಾನ ಕಾರ್ಯದರ್ಶಿ ಅಬೂಸುಫ್ಯಾನ್ ಇಬ್ರಾಹಿಂ ಮದನಿ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ