ತ್ವಾಯಿಫ್ : ಸೌದಿ ಅರೇಬಿಯಾದ ತ್ವಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಂಗಳೂರಿನ ಹೊರವಲಯದ ಹಳೆಯಂಗಡಿ ಪಕ್ಷಿಕೆರೆ ಮೂಲದ ನಾಲ್ವರು ಮೃತಪಟ್ಟಿದ್ದಾರೆ. ಅಫಘಾತವು ತಾಯಿಫ್ ನಿಂದ ಸುಮಾರು 160 ಕಿಲೋ ಮೀಟರ್ ದೂರಲ್ಲಿ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತರನ್ನು ಹಳೆಯಂಗಡಿ ತೋಕೂರು ನಿವಾಸಿ ಶಮೀಮ್ ಮತ್ತು ಝರೀನಾ ದಂಪತಿಯ ಪುತ್ರಿ ಹಿಬಾ ( 29) ಆಕೆಯ ಪತಿ ಮುಹಮ್ಮದ್ ರಮೀಝ್ (34) ಮಕ್ಕಳಾದ ಆರೂಶ್ (3) ಮತ್ತು ರಾಹ ( 3 ತಿಂಗಳು) ಎಂದು ಗುರುತಿಸಲಾಗಿದ್ದು, ಅದೇ ಕಾರಿನಲ್ಲಿದ್ದ ಹಿಬಾ ಅವರ ಸಹೋದರಿ ಶಬ್ಬಮ್ ಎಂಬವರ ಮಗಳು ಫಾತಿಮಾ (19) ಗಂಭೀಯ ಗಾಯಗೊಂಡಿದ್ದು, ಆಕೆಯನ್ನು ರಿಯಾದ್ ನ ಆಸ್ಪತ್ರೆಯಲ್ಲಿ ಚಿಕಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಪೈಕಿ ಅಪಘಾತಕ್ಕೀಡಾಗಿದ್ದ ಕಾರಿನಲ್ಲಿದ್ದ ಹಿಬಾ ಅವರ ಇನ್ನೋರ್ವ ಸಹೋದರಿ ಲುಬ್ಬಾ ಅವರ ಮಗ ಈಸ (4) ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ ಎಂದು ಕುಟುಂಬಸ್ಥರು ಸದಸ್ಯರು ಮಾಹಿತಿ ನೀಡಿದ್ದಾರೆ
ಮೃತ ಹಿಬಾ ಅವರ ತಂದೆ ಶಮೀಮ್ ತಾಯಿ ಝರೀನ ಮತ್ತು ಮೊಮ್ಮಕ್ಕಳು ಒಂದು ಕಾರಿನಲ್ಲಿ ಮತ್ತು ಹಿಬಾ ತನ್ನ ಕುಟುಂಬದೊಂದಿಗೆ ಇನ್ನೊಂದು ಕಾರಿನಲ್ಲಿ ಮಂಗಳವಾರ ಫಜರ್ ನಮಾಝ್ ಮುಗಿಸಿಕೊಂಡು ಉಮ್ರಾ ಯಾತ್ರೆ ಆರಂಭಿಸಿದ್ದರು. ಮಂಗಳವಾರ ರಾತ್ರಿ ರಿಯಾದ್ ತಲುಪಿದ್ದ ಅವರು ಅಲ್ಲೇ ತನ್ನ ಕುಟುಂಸ್ಥರ ಮನೆಯಲ್ಲಿ ಉಳಿದುಕೊಂಡು ಬುಧವಾರ ಬೆಳಗ್ಗೆ ರಿಯಾದ್ ನಿಂದ ಮತ್ತೆ ಉಮ್ರಾ ಯಾತ್ರೆ ಆರಂಭಿಸಿದ್ದರು.
ರಮೀಝ್ ತನ್ನ ಪತ್ನಿ ಹಿಬಾ, ಮಕ್ಕಳಾದ ಆರೂಶ್, ರಾಹ ಮತ್ತು ಹಿಬಾ ಅವರ ಸಹೋದರಿಯರ ಮಕ್ಕಳಾದ ಫಾತಿಮಾ ಮತ್ತು ಈಸ ಜೊತೆ ಒಂದು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಇನ್ನೊಂದು ಕಾರಿನಲ್ಲಿ ಹಿಬಾ ಅವರ ತಂದೆ ಶಮೀಮ್, ತಾಯಿ ಝರೀನಾ ಮೊದಲಾದವರು ಪ್ರಯಾಣಿಸುತ್ತಿದ್ದರು. ರಮೀಝ್ ಅವರು ಚಲಾಯಿಸುತ್ತಿದ್ದ ಕಾರು ರಿಯಾದ್ ನಿಂದ ತಾಯೀಫ್ ಗೆ ಹೋಗುವ ಮಾರ್ಗ ಮಧ್ಯದ ಸುಮಾರು 250 ಕಿ.ಮೀ. ದೂರದದಲ್ಲಿರುವ ಝುಲ್ಪಾ ಎಂಬಲ್ಲಿ ಕಾರು ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ರಸ್ತೆಯಿಂದ ಹಲವು ಮೀಟರ್ ಗಳಷ್ಟು ದೂರಕ್ಕೆ ಹಾರಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.
ಈ ಕುಟುಂಬದ ಅವಘಡ ಮರಣಕ್ಕೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಂತಾರಾಷ್ಟ್ರೀಯ ಸಮಿತಿಯು ತೀವ್ರವಾಗಿ ಸಂತಾಪ ವ್ಯಕ್ತಪಡಿಸಿದೆ.ಮೃತರಿಗೆ ಅಲ್ಲಾಹು ಮಗ್ಫಿರತ್ ಮತ್ತು ಮರ್ಹಮತ್ ಕರುಣಿಸಲಿ, ಮೃತರ ಅಗಲಿಕೆಯನ್ನು ಸಹಿಸುವ ಸಹನಾ ಶಕ್ತಿಯನ್ನು ಅವರ ಕುಟುಂಬಕ್ಕೆ ಅಲ್ಲಾಹು ದಯಪಾಲಿಸಲಿ ಎಂದು ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಡಿ.ಪಿ. ಬೈತಾರ್ ಸಖಾಫಿಯವರು ಸಂತಾಪ ಸೂಚನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್