ತ್ವಾಯಿಫ್ : ಸೌದಿ ಅರೇಬಿಯಾದ ತ್ವಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಂಗಳೂರಿನ ಹೊರವಲಯದ ಹಳೆಯಂಗಡಿ ಪಕ್ಷಿಕೆರೆ ಮೂಲದ ನಾಲ್ವರು ಮೃತಪಟ್ಟಿದ್ದಾರೆ. ಅಫಘಾತವು ತಾಯಿಫ್ ನಿಂದ ಸುಮಾರು 160 ಕಿಲೋ ಮೀಟರ್ ದೂರಲ್ಲಿ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತರನ್ನು ಹಳೆಯಂಗಡಿ ತೋಕೂರು ನಿವಾಸಿ ಶಮೀಮ್ ಮತ್ತು ಝರೀನಾ ದಂಪತಿಯ ಪುತ್ರಿ ಹಿಬಾ ( 29) ಆಕೆಯ ಪತಿ ಮುಹಮ್ಮದ್ ರಮೀಝ್ (34) ಮಕ್ಕಳಾದ ಆರೂಶ್ (3) ಮತ್ತು ರಾಹ ( 3 ತಿಂಗಳು) ಎಂದು ಗುರುತಿಸಲಾಗಿದ್ದು, ಅದೇ ಕಾರಿನಲ್ಲಿದ್ದ ಹಿಬಾ ಅವರ ಸಹೋದರಿ ಶಬ್ಬಮ್ ಎಂಬವರ ಮಗಳು ಫಾತಿಮಾ (19) ಗಂಭೀಯ ಗಾಯಗೊಂಡಿದ್ದು, ಆಕೆಯನ್ನು ರಿಯಾದ್ ನ ಆಸ್ಪತ್ರೆಯಲ್ಲಿ ಚಿಕಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಪೈಕಿ ಅಪಘಾತಕ್ಕೀಡಾಗಿದ್ದ ಕಾರಿನಲ್ಲಿದ್ದ ಹಿಬಾ ಅವರ ಇನ್ನೋರ್ವ ಸಹೋದರಿ ಲುಬ್ಬಾ ಅವರ ಮಗ ಈಸ (4) ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ ಎಂದು ಕುಟುಂಬಸ್ಥರು ಸದಸ್ಯರು ಮಾಹಿತಿ ನೀಡಿದ್ದಾರೆ
ಮೃತ ಹಿಬಾ ಅವರ ತಂದೆ ಶಮೀಮ್ ತಾಯಿ ಝರೀನ ಮತ್ತು ಮೊಮ್ಮಕ್ಕಳು ಒಂದು ಕಾರಿನಲ್ಲಿ ಮತ್ತು ಹಿಬಾ ತನ್ನ ಕುಟುಂಬದೊಂದಿಗೆ ಇನ್ನೊಂದು ಕಾರಿನಲ್ಲಿ ಮಂಗಳವಾರ ಫಜರ್ ನಮಾಝ್ ಮುಗಿಸಿಕೊಂಡು ಉಮ್ರಾ ಯಾತ್ರೆ ಆರಂಭಿಸಿದ್ದರು. ಮಂಗಳವಾರ ರಾತ್ರಿ ರಿಯಾದ್ ತಲುಪಿದ್ದ ಅವರು ಅಲ್ಲೇ ತನ್ನ ಕುಟುಂಸ್ಥರ ಮನೆಯಲ್ಲಿ ಉಳಿದುಕೊಂಡು ಬುಧವಾರ ಬೆಳಗ್ಗೆ ರಿಯಾದ್ ನಿಂದ ಮತ್ತೆ ಉಮ್ರಾ ಯಾತ್ರೆ ಆರಂಭಿಸಿದ್ದರು.
ರಮೀಝ್ ತನ್ನ ಪತ್ನಿ ಹಿಬಾ, ಮಕ್ಕಳಾದ ಆರೂಶ್, ರಾಹ ಮತ್ತು ಹಿಬಾ ಅವರ ಸಹೋದರಿಯರ ಮಕ್ಕಳಾದ ಫಾತಿಮಾ ಮತ್ತು ಈಸ ಜೊತೆ ಒಂದು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಇನ್ನೊಂದು ಕಾರಿನಲ್ಲಿ ಹಿಬಾ ಅವರ ತಂದೆ ಶಮೀಮ್, ತಾಯಿ ಝರೀನಾ ಮೊದಲಾದವರು ಪ್ರಯಾಣಿಸುತ್ತಿದ್ದರು. ರಮೀಝ್ ಅವರು ಚಲಾಯಿಸುತ್ತಿದ್ದ ಕಾರು ರಿಯಾದ್ ನಿಂದ ತಾಯೀಫ್ ಗೆ ಹೋಗುವ ಮಾರ್ಗ ಮಧ್ಯದ ಸುಮಾರು 250 ಕಿ.ಮೀ. ದೂರದದಲ್ಲಿರುವ ಝುಲ್ಪಾ ಎಂಬಲ್ಲಿ ಕಾರು ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ರಸ್ತೆಯಿಂದ ಹಲವು ಮೀಟರ್ ಗಳಷ್ಟು ದೂರಕ್ಕೆ ಹಾರಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.
ಈ ಕುಟುಂಬದ ಅವಘಡ ಮರಣಕ್ಕೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಂತಾರಾಷ್ಟ್ರೀಯ ಸಮಿತಿಯು ತೀವ್ರವಾಗಿ ಸಂತಾಪ ವ್ಯಕ್ತಪಡಿಸಿದೆ.ಮೃತರಿಗೆ ಅಲ್ಲಾಹು ಮಗ್ಫಿರತ್ ಮತ್ತು ಮರ್ಹಮತ್ ಕರುಣಿಸಲಿ, ಮೃತರ ಅಗಲಿಕೆಯನ್ನು ಸಹಿಸುವ ಸಹನಾ ಶಕ್ತಿಯನ್ನು ಅವರ ಕುಟುಂಬಕ್ಕೆ ಅಲ್ಲಾಹು ದಯಪಾಲಿಸಲಿ ಎಂದು ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಡಿ.ಪಿ. ಬೈತಾರ್ ಸಖಾಫಿಯವರು ಸಂತಾಪ ಸೂಚನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?