ಮಂಗಳೂರು: ದ.ಕ.ಜಿಲ್ಲೆಯ ಜನತೆ ಮೂಲತಃ ಸಹಿಷ್ಣುತಾ ಪ್ರಿಯರು, ಸಮಯ ಸಾಧಕರ ಹಾದಿಗೆ ಬಿದ್ದು ತಮ್ಮತನವನ್ನು ತಾತ್ಕಲಿಕವಾಗಿ ಕಳೆದು ಕೊಂಡವರು. ಈ ಬಾರಿ ಜನತೆ ಜಿಲ್ಲೆಯಿಂದ ಸಹಿಷ್ಣುತೆ ಪ್ರತಿಪಾದಕ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ರವರನ್ನು ದೆಹಲಿಗೆ ಕಳುಹಿಸಲಿದ್ದಾರೆ.
ಕಳೆದ ಮೂರು ದಶಕಳಿಂದ ಜಿಲ್ಲೆಯ ಜನರ ನೈಜ ವೈಭವತೆಯನ್ನು ದೇಶದ ಮುಂದೆ ಪ್ರತಿಪಾದಿಸುವ ಪ್ರಯತ್ನವನ್ನು ಮಾಡದೆ ಇರುವ ಜನಪ್ರತಿನಿಧಿಗಳನ್ನು ಜನರು ಈ ಬಾರಿ ತೊರೆಯಲಿದ್ದಾರೆ. ಅಷ್ಟೂ ವರ್ಷಗಳಲ್ಲಿ ಜಿಲ್ಲೆಯ ಸಾಮರಸ್ಯಕ್ಕೆ ಹುಳಿ ಹಿಂಡಿದ ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ಅಂತಹ ಕುಹಕಿಗಳ ಪ್ರಯತ್ನದಿಂದಾಗಿ ಜಿಲ್ಲೆಯ ಜನತೆ ಇನ್ನಿಲ್ಲದ ಬೆಲೆ ತೆತ್ತಿರುವುದು ಖೇದಕರ.
ಆದರೆ ಈ ಬಾರಿ ಜಿಲ್ಲೆಯ ಜನತೆ ದಾರ್ಶನಿಕತೆ, ಪ್ರತಿಪಾದತ್ವ ಮತ್ತು ಸಹಿಷ್ಣುತೆಯ ಪರವಾಗಿದ್ದಾರೆ. ಸಹಿಷ್ಣುತೆ ಪ್ರತಿಪಾದಕ ಅಭ್ಯರ್ಥಿಯೇ ಮೂರು ದಶಕಗಳ ನಂತರ ಲೋಕಸಭೆ ಪ್ರವೇಶಿಸಲಿದ್ದಾರೆ. ಜಿಲ್ಲೆಯ ಜನತೆ ವಿಜಯಿಯಾಗಲಿದ್ದಾರೆ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ