ಮಂಗಳೂರು : ಇತ್ತೀಚೆಗೆ ತುಮಕೂರಲ್ಲಿ ಅತೀ ಕ್ರೂರವಾಗಿ ಕೊಲೆಯಾದವರ ಮನೆಗೆ ದಕ್ಷಿಣ ಕನ್ನಡ ಜಿಲ್ಲಾ ವಕ್ಪ್ ಸಲಹಾ ಸಮಿತಿ ಅಧ್ಯಕ್ಷ ಬಿಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಭೇಟಿ ನೀಡಿದ್ದರು. ಕುಟುಂಬದವರೊಂದಿಗೆ ಚರ್ಚಿಸಿದ ಅಧ್ಯಕ್ಷರು ನಡೆದ ಘಟನೆಗಳ ಬಗ್ಗೆ ಮಾಹಿತಿಗಳನ್ನು ಪಡೆದುಕೊಂಡರು ಈ ಘಟನೆಯಿಂದ ಮೂವರು ಕೂಡ ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದು ಮುಂದಕ್ಕೆ ಇವರ ಮನೆಗಳು ಕಟ್ಟುವ ಸಂದರ್ಭದಲ್ಲಿ ನಮ್ಮಿಂದಾಗುವ ಸಹಾಯ ಸಹಕಾರಗಳನ್ನು ನೀಡುವುದಾಗಿ ಅಧ್ಯಕ್ಷರು ಕುಟುಂಬದವರೊಂದಿಗೆ ತಿಳಿಸಿದರು.
ನಂತರ ಅಲ್ಲಿ ಸಿಕ್ಕಿದ ಕೆಲವು ಮಾಹಿತಿಗಳ ಪ್ರಕಾರ ಈ ಮೊದಲು ಕೂಡ ಹಲವಾರು ಜನರನ್ನು ಇದೇ ರೀತಿ ಕರೆಸಿ, ಹಲವರಿಗೆ ಪಂಗನಾಮ ಹಾಕಿದ ವಿಷಯಗಳು ಒಂದೊಂದಾಗಿ ಹೊರಬರುತ್ತಿರುವುದನ್ನು ಅಲ್ಲಿ ಜನರು ಹೇಳಿಕೊಳ್ಳುತ್ತಿದ್ದರು. ಅಲ್ಲದೆ ಆ ಒಂದು ಪ್ರದೇಶದಲ್ಲಿ ಇರುವ ಹೊಲದಲ್ಲಿ ಹಲವರನ್ನು ಇದೇ ರೀತಿ ಕರೆಸಿ ಕೊಲೆ ಮಾಡಿ ಹೊಲಕ್ಕೆ ಎಸೆಯಲಾಗಿದೆ ಎಂಬ ಮಾಹಿತಿ ಕೂಡ ಅಲ್ಲಿ ಕೇಳಿಸುತ್ತಿತ್ತು ಇವೆಲ್ಲ ಘಟನೆಗಳನ್ನು ಮನವರಿಕೆ ಮಾಡಿಕೊಂಡ ಅಧ್ಯಕ್ಷರು ಸರಕಾರಕ್ಕೆ ಈ ಒಂದು ಹೇಳಿಕೆಯ ಮೂಲಕ ಹಲವಾರು ಜನರನ್ನು ಆಮಿಷಕ್ಕೆ ಒಳಪಡಿಸಿ ಅವರಿಂದ ದುಡ್ಡುಗಳನ್ನು ಕಸಿದು ಅವರ ಜೀವಗಳನ್ನು ಬಳಿ ಪಡೆದುಕೊಳ್ಳುವ ಇಂಥವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಸರಕಾರಕ್ಕೆ ಒತ್ತಾಯಿಸುತ್ತಾ ಈ ಒಂದು ಗ್ಯಾಂಗಿನ ಹಿಂದಿರುವ ಎಲ್ಲಾ ವಿಷಯಗಳನ್ನು ಸರಕಾರ ತನಿಖೆಗೊಳಪಡಿಸಬೇಕೆಂದು ಈ ಮೂಲಕ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಸದಸ್ಯರಾದ ಅಶ್ರಫ್ ಕಿನಾರ ಮಂಗಳೂರು ,ಸಿದ್ದಿಖ್ ಕಾಜೂರು , ಬಿಕೆ ಹಿದಾಯ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ