ಕಾಸರಗೋಡು | ರಿಯಾಝ್ ಮೌಲವಿ ಹತ್ಯೆ ಪ್ರಕರಣದಲ್ಲಿ ಆರ್ ಎಸ್ ಎಸ್ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್ ತೀರ್ಪು ಕೇಳಿ ರಿಯಾಝ್ ಮೌಲವಿ ಪತ್ನಿ ಬೇಸರ ಸಹಿಸಲಾಗದೆ ಬಿಕ್ಕಿ ಬಿಕ್ಕಿ ಅಳಲಾರಂಭಿಸಿದರು. ಮೂವರು ಆರೋಪಿಗಳನ್ನು ಕಾಸರಗೋಡು ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ.
ತೀರ್ಪು ಕೇಳಿ ಅಳುತ್ತಿದ್ದ ರಿಯಾಝ್ ಮೌಲವಿ ಪತ್ನಿ ಸೈದಾ, ನ್ಯಾಯಾಲಯದ ಮೇಲೆ ಭರವಸೆ ಇತ್ತು, ಆದರೆ ನ್ಯಾಯ ಸಿಗಲಿಲ್ಲ ಎಂದರು. ತೀರ್ಪು ಕೇಳಲು ಹೆಂಡತಿ ಮಗುವಿನೊಂದಿಗೆ ಬಂದಿದ್ದರು. ರಿಯಾಝ್ ಮೌಲವಿಯ ಸಂಬಂಧಿಕರು ಕೂಡ ನ್ಯಾಯಾಲಯದ ತೀರ್ಪಿನಿಂದ ಆಘಾತಕ್ಕೊಳಗಾಗಿದ್ದೇವೆ ಎಂದು ಹೇಳಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯ ನಿರೀಕ್ಷೆಯಲ್ಲಿದ್ದೆವು, ಆದರೆ ತೀರ್ಪಿನ ಬಗ್ಗೆ ತುಂಬಾ ದುಃಖವಾಗಿದೆ ಎಂದು ಸಹೋದರ ಹೇಳಿದರು.
ಕ್ರಿಯಾ ಸಮಿತಿ ಪದಾಧಿಕಾರಿಗಳೂ ತೀರ್ಪಿನಲ್ಲಿ ನೋವಿದ್ದು, ಷಡ್ಯಂತ್ರ ಹೊರ ಬರಬೇಕು ಎಂದರು. ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧದ ಮೇಲ್ಮನವಿಯನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕ್ರಿಯಾ ಸಮಿತಿ ತಿಳಿಸಿದೆ.
ನ್ಯಾಯಾಲಯದ ಆವರಣದಲ್ಲಿ ಜನಸಾಗರವೇ ನೆರೆದಿತ್ತು. ಪೊಲೀಸರು ಕೂಡ ಭಾರೀ ಭದ್ರತೆ ಒದಗಿಸಿದ್ದಾರೆ. ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಒಂದು ಸಾಲಿನ ತೀರ್ಪು ನೀಡಿದೆ. ಆರೆಸ್ಸೆಸ್ ಕಾರ್ಯಕರ್ತರಾದ ಅಜೇಶ್, ನಿತಿನ್ ಕುಮಾರ್ ಮತ್ತು ಅಖಿಲೇಶ್ ಪ್ರಕರಣದ ಆರೋಪಿಗಳು.
ಕಾಸರಗೋಡು ಚೂರಿಯಲ್ಲಿ ನಡೆದ ರಿಯಾಝ್ ಮೌಲವಿ ಹತ್ಯೆ ಕೇರಳವನ್ನೇ ಬೆಚ್ಚಿಬೀಳಿಸಿತ್ತು. ಆರೋಪಿಗಳು ಮಸೀದಿಗೆ ನುಗ್ಗಿ ಹತ್ಯೆ ಮಾಡಿದ್ದಾರೆ. ಕೋಮು ಸಂಘರ್ಷವೇ ಆರೋಪಿಗಳ ಉದ್ದೇಶ ಎಂದು ಆರೋಪಪಟ್ಟಿಯಲ್ಲಿ ದೃಢಪಟ್ಟಿದೆ.
ಚೂರಿ ಎಂಬುದು ಈ ಹಿಂದೆಯೂ ಕೋಮು ಘರ್ಷಣೆಗಳು ಹಾಗೂ ಇಂತಹ ಹಲ್ಲೆ, ಹತ್ಯೆಗಳು ನಡೆದಿರುವ ಪ್ರದೇಶ. ಆದ್ದರಿಂದ, ರಿಯಾಜ್ ಮೌಲವಿ ಹತ್ಯೆಯು ನಿರಂತರ ಪ್ರತಿಭಟನೆಗೆ ಕಾರಣವಾಯಿತು. ಕೊಡಗು ಮೂಲದ ರಿಯಾಝ್ ಮೌಲವಿ 2017 ರ ಮಾರ್ಚ್ 20 ರಂದು ಹತ್ಯೆಗೀಡಾದರು. ಚೂರಿಯಲ್ಲಿ ಮದರಸಾ ಶಿಕ್ಷಕರಾಗಿದ್ದ ರಿಯಾಝ್ ಮೌಲವಿ ಪಕ್ಕದ ಮಸೀದಿಯಲ್ಲಿ ವಾಸವಾಗಿದ್ದರು. ಮೂವರು ಸದಸ್ಯರ ಗುಂಪು ಮಸೀದಿಗೆ ನುಗ್ಗಿ ಈ ಕೃತ್ಯ ಎಸಗಿದೆ. ಘಟನೆಯ ನಂತರ, ಹಲವು ದಿನಗಳ ಕಾಲ ಪ್ರದೇಶದಲ್ಲಿ ಕರ್ಪೂ ಜಾರಿಯಲ್ಲಿತ್ತು.
ಮೂರು ದಿನಗಳೊಳಗೆ ಆರೋಪಿಗಳನ್ನು ಬಂಧಿಸಲಾಗಿದ್ದು, ಕಾಲಮಿತಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲು ಸಾಧ್ಯವಾಗಿರುವುದು ರಿಯಾಝ್ ಮೌಲವಿ ಅವರಿಗೆ ನ್ಯಾಯ ಸಿಗುವ ವಿಶ್ವಾಸ ಮೂಡಿಸಿತ್ತು. ಕೊಲೆಯಾದ 90 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಆರೋಪಿಗಳು ಅಪರಾಧ ಎಸಗಿದ್ದಾರೆ ಎಂಬುದಕ್ಕೆ ಅಪರಾಧ ನಡೆದ ಸ್ಥಳದಿಂದ ಆರೋಪಿಗಳ ರಕ್ತದ ಮಾದರಿ ಸೇರಿದಂತೆ ವೈಜ್ಞಾನಿಕ ಪುರಾವೆಗಳು ಪೊಲೀಸರಿಗೆ ಲಭಿಸಿತ್ತು.ಡಿಎನ್ಎ ಪರೀಕ್ಷೆಯಿಂದಲೂ ಇದು ದೃಢಪಟ್ಟಿದೆ. ಲೋಪದೋಷ ರಹಿತ ತನಿಖೆ ನಡೆದಿದ್ದರೂ ಆರೋಪಿಗಳು ಹೇಗೆ ಖುಲಾಸೆಗೊಂಡರು ಎಂಬ ಪ್ರಶ್ನೆ ಉದ್ಭವಿಸಿದೆ.
ಕೋಮುಗಲಭೆ ಸೃಷ್ಟಿಸುವ ಉದ್ದೇಶದಿಂದ ಹತ್ಯೆ ನಡೆದಿರುವುದು ದೃಢಪಟ್ಟಿದೆ. ಪ್ರಾಸಿಕ್ಯೂಷನ್ನಿಂದಲೂ ಯಾವುದೇ ತಪ್ಪಿನ ಸೂಚನೆ ಇರಲಿಲ್ಲ. ಇಷ್ಟೆಲ್ಲಾ ಸಾಕ್ಷ್ಯಾಧಾರಗಳಿರುವ ಪ್ರಕರಣದಲ್ಲಿ ಆರೋಪಿಗಳನ್ನು ಹೇಗೆ ಖುಲಾಸೆಗೊಳಿಸಲಾಗಿದೆ ಎಂಬ ಪ್ರಶ್ನೆ ಉದ್ಭವಿಸಿದೆ. ರಿಯಾಝ್ ಮೌಲವಿ ಹತ್ಯೆಯಾಗಿ ಏಳು ವರ್ಷಗಳ ನಂತರ ನ್ಯಾಯಾಲಯ ಈ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದಾಗ ನ್ಯಾಯ ನಿರಾಕರಿಸಲಾಗಿದೆ ಎಂಬ ಭಾವನೆ ಮೂಡಿದೆ.
















ಇನ್ನಷ್ಟು ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ