ಕಾಸರಗೋಡು | ರಿಯಾಝ್ ಮೌಲವಿ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದ ತೀರ್ಪಿನಲ್ಲಿ ಪ್ರಾಸಿಕ್ಯೂಷನ್ ಮತ್ತು ತನಿಖಾಧಿಕಾರಿ ವಿರುದ್ಧ ಗಂಭೀರ ಆರೋಪಗಳನ್ನು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ.
ಕೊಲೆಯ ಉದ್ದೇಶವನ್ನು ಸ್ಥಾಪಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ. ಮುಸ್ಲಿಂ ಸಮುದಾಯದ ಮೇಲಿನ ದ್ವೇಷವೇ ಕೊಲೆಗೆ ಕಾರಣ ಎಂಬ ಆರೋಪವನ್ನು ಪ್ರಾಸಿಕ್ಯೂಷನ್ ಸಾಬೀತುಪಡಿಸಲು ಸಾಧ್ಯವಾಗಲಿಲ್ಲ. ಬಟ್ಟೆಯ ಮೇಲಿನ ರಕ್ತದ ಕಲೆಗಳ ಡಿಎನ್ಎ ಪರೀಕ್ಷೆಯನ್ನೂ ನಡೆಸಿಲ್ಲ. ರಿಯಾಝ್ ಮೌಲವಿ ಅವರ ಕೊಠಡಿಯಿಂದ ವಶಪಡಿಸಿಕೊಂಡ ಫೋನ್ ಮತ್ತು ಸಿಮ್ಗಳನ್ನು ಪರಿಶೀಲಿಸಲಾಗಿಲ್ಲ. ತನಿಖೆ ಏಕಪಕ್ಷೀಯವಾಗಿತ್ತು ಎಂದೂ ತೀರ್ಪು ಹೇಳುತ್ತದೆ.
ರಿಯಾಝ್ ಮೌಲವಿ ಅವರ ಹತ್ಯೆಗೂ ಮುನ್ನ ಒಡನಾಟದಲ್ಲಿದ್ದವರನ್ನು ಪತ್ತೆ ಮಾಡಿಲ್ಲ. ತನಿಖಾ ತಂಡ ಈ ಅವಕಾಶವನ್ನು ಕಳೆದುಕೊಂಡಿದೆ ಎಂದು ನ್ಯಾಯಾಲಯ ಹೇಳಿದೆ. ಆರೋಪಿಗಳ ಆರ್ಎಸ್ಎಸ್ ಸಂಪರ್ಕವನ್ನು ಸಾಬೀತುಪಡಿಸಲು ಸಾಕ್ಷ್ಯಗಳನ್ನು ಪ್ರಸ್ತುತಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತೀರ್ಪು ಹೇಳಿದೆ.
ಕಾಸರಗೋಡು ಮುಹಮ್ಮದ್ ರಿಯಾಝ್ ಮೌಲವಿ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಕಾಸರಗೋಡು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಕೆ.ಬಾಲಕೃಷ್ಣನ್ ಪ್ರಕರಣದ ವಿಚಾರಣೆ ನಡೆಸಿದರು. ಕೇಲುಗುಡ್ಡೆಯ ಅಜೇಶ್ ಅಲಿಯಾಸ್ ಅಪ್ಪು ಮತ್ತು ನಿತಿನ್ಕುಮಾರ್ ಮತ್ತು ಕೇಲುಗುಡ್ಡೆ ಗಂಗೈ ರಸ್ತೆಯ ಅಖಿಲೇಶ್ ಅಲಿಯಾಸ್ ಅಖಿಲ್ ಬಂಧಿತ ಆರೋಪಿಗಳು. ಆರೋಪಿಗಳಿಗೆ ಈವರೆಗೂ ಜಾಮೀನು ಸಿಗದ ಕಾರಣ ಏಳು ವರ್ಷಗಳಿಂದ ಜೈಲಿನಲ್ಲಿದ್ದರು. ಕಾಸರಗೋಡು ಹಳೆ ಚೂರಿ ಮದರಸಾದ ಶಿಕ್ಷಕರಾಗಿದ್ದ ಕರ್ನಾಟಕದ ಕೊಡಗು ನಿವಾಸಿ ಮುಹಮ್ಮದ್ ರಿಯಾಝ್ ಮೌಲವಿ ಅವರನ್ನು 2017ರ ಮಾರ್ಚ್ 20ರಂದು ಆರೋಪಿಗಳು ಹತ್ಯೆ ಮಾಡಿದ್ದರು. ಕಣ್ಣೂರು ಕ್ರೈಂ ಬ್ರಾಂಚ್ ಎಸ್ಪಿ ಡಾ.ಎ.ಶ್ರೀನಿವಾಸನ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು.
















ಇನ್ನಷ್ಟು ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ