ಮಂಗಳೂರು: ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಮಂಗಳೂರಿನ ಬಿಜೆಪಿ ಕಚೇರಿಯ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮತ್ತು ಮೇಯರ್ ಸುಧೀರ್ ಶೆಟ್ಟಿ ಮಂಗಳೂರಿನ ಮುಸ್ಲಿಮ್ ಮತ್ಸ್ಯ ವ್ಯಾಪಾರಿಗಳು ಮತ್ತು ಮೊಗವೀರ ಸಮುದಾಯದ ಮದ್ಯೆ ಮತೀಯ ದ್ವೇಷ ಹಂಚಲು ಪ್ರಯತ್ನಿಸಿದ್ದಾರೆ.
ಇದು ಚುನಾವಣೆ ಹತ್ತಿರ ಬರುವಾಗ ಬಿಜೆಪಿಯ ಎಂದಿನ ಚಾಳಿಯೇ ಆಗಿರುತ್ತದೆ.
ಆದರೆ ಮಂಗಳೂರಿನ ಧಕ್ಕೆಯಲ್ಲಿ ವಿಭಿನ್ನ ಸಮುದಾಯದ ಜನರು ಅದೆಷ್ಟೋ ವರ್ಷಗಳಿಂದ ಸೌಹಾರ್ಧ ಯುತ ವ್ಯವಹಾರ ನಡೆಸಿಕೊಂಡು ಬರುತ್ತಿರುವುದು ಮಂಗಳೂರಿನ ಮತ್ತು ಜಿಲ್ಲೆಯ ಮತ್ಸೋಧ್ಯಮವೇ ಸಾಕ್ಷಿ.ಇಲ್ಲಿ ಮೀನುಗಾರರಿಗೆ ಯಾವುದೇ ಮತೀಯ ದ್ವೇಷ ಇಲ್ಲ. ಪರಸ್ಪರ ಸಹಕಾರ ಕೊಡು ಕೊಳ್ಳುವಿಕೆ ಇಲ್ಲಿನ ಶಾಶ್ವತ ಧರ್ಮ.
ಈ ಹಿಂದೆ ಈದ್ ರಜೆಯ ವಿಷಯದಲ್ಲಿ ಸ್ಥಳೀಯ ಸ್ವಯಂ ಘೋಷಿತ ಪುಡಾರಿ ಒಬ್ಬ ಮುಸ್ಲಿಮರ ಮತ್ತು ಮೊಗವೀರರ ಮಧ್ಯೆ ದ್ವೇಷ ಬಿತ್ತಲು ಪ್ರಯತ್ನಿಸಿ ವಿಫಲವಾಗಿದ್ದು, ಈಗ ಹಾಲಿ ಮೇಯರ್ ಸುಧೀರ್ ಶೆಟ್ಟಿ ದ್ವೇಷವೆಂಬ ಬಲೆಯಲ್ಲಿ ಮಂಗಳೂರಿನ ಸಾಮರಸ್ಯದ ಮತ್ಸ್ಯವನ್ನು ಹಿಡಿಯಲು ಹೋದರೆ ಮಂಗಳೂರಿನ ಜನತೆ ಸುಧೀರ್ ಶೆಟ್ಟಿಯಂತಹ ಅವಿವೇಕಿ ಅಲ್ಲ ಎಂದು ತಿಳಿಯುವುದು ಒಳಿತು ಎಂದು ಮಾಜಿ ಮೇಯರ್ ಅಶ್ರಫ್ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರಿನ ಧಕ್ಕೆಯ ಸೌಹಾರ್ದತೆ ಕರ್ನಾಟಕದ ಇಡೀ ಜನತೆಗೆ ಮಾದರಿ ಆಗಿದೆ ಎಂದು ತಿಳಿಯಲಿ. ಚುನಾವಣೆ ಪ್ರಚಾರದಲ್ಲಿ ಸುಧೀರ್ ಶೆಟ್ಟಿ ಮತ್ತು ಅಭ್ಯರ್ಥಿ ಕೋಮು ರಹಿತ ವಿಷಯಗಳನ್ನು ಜನರಲ್ಲಿ ಪ್ರಸ್ತಾಪಿಸಿ ಮತ ಯಾಚಿಸಲಿ ಎಂದು ಕೆ.ಅಶ್ರಫ್( ಮಾಜಿ ಮೇಯರ್)
ಅಧ್ಯಕ್ಷರು. ಮಂಗಳೂರು ಧಕ್ಕೆ ಹಸಿಮೀನು ಮಾರಾಟ ಮತ್ತು ವ್ಯಾಪಾರಸ್ಥರ ಸಂಘ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ