ಮಂಗಳೂರು: ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಮಂಗಳೂರಿನ ಬಿಜೆಪಿ ಕಚೇರಿಯ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮತ್ತು ಮೇಯರ್ ಸುಧೀರ್ ಶೆಟ್ಟಿ ಮಂಗಳೂರಿನ ಮುಸ್ಲಿಮ್ ಮತ್ಸ್ಯ ವ್ಯಾಪಾರಿಗಳು ಮತ್ತು ಮೊಗವೀರ ಸಮುದಾಯದ ಮದ್ಯೆ ಮತೀಯ ದ್ವೇಷ ಹಂಚಲು ಪ್ರಯತ್ನಿಸಿದ್ದಾರೆ.
ಇದು ಚುನಾವಣೆ ಹತ್ತಿರ ಬರುವಾಗ ಬಿಜೆಪಿಯ ಎಂದಿನ ಚಾಳಿಯೇ ಆಗಿರುತ್ತದೆ.
ಆದರೆ ಮಂಗಳೂರಿನ ಧಕ್ಕೆಯಲ್ಲಿ ವಿಭಿನ್ನ ಸಮುದಾಯದ ಜನರು ಅದೆಷ್ಟೋ ವರ್ಷಗಳಿಂದ ಸೌಹಾರ್ಧ ಯುತ ವ್ಯವಹಾರ ನಡೆಸಿಕೊಂಡು ಬರುತ್ತಿರುವುದು ಮಂಗಳೂರಿನ ಮತ್ತು ಜಿಲ್ಲೆಯ ಮತ್ಸೋಧ್ಯಮವೇ ಸಾಕ್ಷಿ.ಇಲ್ಲಿ ಮೀನುಗಾರರಿಗೆ ಯಾವುದೇ ಮತೀಯ ದ್ವೇಷ ಇಲ್ಲ. ಪರಸ್ಪರ ಸಹಕಾರ ಕೊಡು ಕೊಳ್ಳುವಿಕೆ ಇಲ್ಲಿನ ಶಾಶ್ವತ ಧರ್ಮ.
ಈ ಹಿಂದೆ ಈದ್ ರಜೆಯ ವಿಷಯದಲ್ಲಿ ಸ್ಥಳೀಯ ಸ್ವಯಂ ಘೋಷಿತ ಪುಡಾರಿ ಒಬ್ಬ ಮುಸ್ಲಿಮರ ಮತ್ತು ಮೊಗವೀರರ ಮಧ್ಯೆ ದ್ವೇಷ ಬಿತ್ತಲು ಪ್ರಯತ್ನಿಸಿ ವಿಫಲವಾಗಿದ್ದು, ಈಗ ಹಾಲಿ ಮೇಯರ್ ಸುಧೀರ್ ಶೆಟ್ಟಿ ದ್ವೇಷವೆಂಬ ಬಲೆಯಲ್ಲಿ ಮಂಗಳೂರಿನ ಸಾಮರಸ್ಯದ ಮತ್ಸ್ಯವನ್ನು ಹಿಡಿಯಲು ಹೋದರೆ ಮಂಗಳೂರಿನ ಜನತೆ ಸುಧೀರ್ ಶೆಟ್ಟಿಯಂತಹ ಅವಿವೇಕಿ ಅಲ್ಲ ಎಂದು ತಿಳಿಯುವುದು ಒಳಿತು ಎಂದು ಮಾಜಿ ಮೇಯರ್ ಅಶ್ರಫ್ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರಿನ ಧಕ್ಕೆಯ ಸೌಹಾರ್ದತೆ ಕರ್ನಾಟಕದ ಇಡೀ ಜನತೆಗೆ ಮಾದರಿ ಆಗಿದೆ ಎಂದು ತಿಳಿಯಲಿ. ಚುನಾವಣೆ ಪ್ರಚಾರದಲ್ಲಿ ಸುಧೀರ್ ಶೆಟ್ಟಿ ಮತ್ತು ಅಭ್ಯರ್ಥಿ ಕೋಮು ರಹಿತ ವಿಷಯಗಳನ್ನು ಜನರಲ್ಲಿ ಪ್ರಸ್ತಾಪಿಸಿ ಮತ ಯಾಚಿಸಲಿ ಎಂದು ಕೆ.ಅಶ್ರಫ್( ಮಾಜಿ ಮೇಯರ್)
ಅಧ್ಯಕ್ಷರು. ಮಂಗಳೂರು ಧಕ್ಕೆ ಹಸಿಮೀನು ಮಾರಾಟ ಮತ್ತು ವ್ಯಾಪಾರಸ್ಥರ ಸಂಘ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?