ಮಂಗಳೂರು, ಏಪ್ರಿಲ್.9: ಇಂದು ಸಂಜೆ ಶವ್ವಾಲ್ ತಿಂಗಳ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ನಾಳೆ ಏಪ್ರಿಲ್ 10 ಬುಧವಾರ ಈದುಲ್ ಫಿತರ್ ಹಬ್ಬ ಆಚರಿಸುವಂತೆ ಖಾಝಿಗಳು ಕರೆ ನೀಡಿದ್ದಾರೆ.
ರಂಝಾನ್ ತಿಂಗಳ 29ನೇ ದಿನವಾದ ಇಂದು ಸಂಜೆ ಶವ್ವಾಲ್ ತಿಂಗಳ ಚಂದ್ರ ದರ್ಶನವಾಗಿರುವುದರಿಂದ ನಾಳೆ ಶವ್ವಾಲ್ ಪ್ರಥಮ ದಿನವಾಗಿದ್ದು ನಾಡಿನ ವಿಶ್ವಾಸಿಗಳು ಈದುಲ್ ಫಿತರ್ ಹಬ್ಬವನ್ನು ಆಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿಗಳಾದ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಮದನಿ ಅಲ್ ಬುಖಾರಿ ಮತ್ತು ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಹಾಗೂ ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಮಾಣಿ ಉಸ್ತಾದ್ ಕರೆ ನೀಡಿದ್ದಾರೆ.
ಪವಿತ್ರ ರಮಳಾನ್ ಮುಸಲ್ಮಾನರ ಮಟ್ಟಿಗೆ ಅತ್ಯಂತ ಪವಿತ್ರವಾದ ತಿಂಗಳಾಗಿದೆ. ಈ ತಿಂಗಳಿನಲ್ಲಿ ಕಠಿಣ ವೃತವನ್ನು ಆಚರಿಸಿ, ಅಲ್ಲಾಹನ ಇಷ್ಟ ದಾಸರ ಸಾಲಿನಲ್ಲಿ ಸೇರುವ ಉದ್ದೇಶದಿಂದ ಎಲ್ಲಾ ವಿಧ ಕೆಡುಕುಗಳಿಂದಲೂ ದೂರ ಸರಿದು ಹೆಚ್ಚೆಚ್ಚು ಒಳಿತನ್ನು ಮಾಡುತ್ತಾ ಉತ್ತಮ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳಲು ಶ್ರಮಿಸುತ್ತಾರೆ.
ರಮಳಾನ್ ತಿಂಗಳ ಕಡ್ಡಾಯ ವೃತವನ್ನು ಕೊನೆಗೊಳಿಸುವ ದಿನದಂದು ಈದುಲ್ ಫಿತರ್ ಹಬ್ಬವನ್ನು ಆಚರಿಸಲಾಗುತ್ತದೆ. ರಮಳಾನ್ 29 ನೇ ಉಪವಾಸ ತೊರೆದ ಬಳಿಕ ಶವ್ವಾಲ್ ಚಂದ್ರ ದರ್ಶನವಾದಲ್ಲಿ ಮರುದಿನ ಈದ್ ಆಚರಿಸಲಾಗುತ್ತದೆ. ಚಂದ್ರ ದರ್ಶನವಾಗದಿದ್ದಲ್ಲಿ ರಮಳಾನ್ 30 ಪೂರ್ತೀಕರಿಸಿದ ನಂತರ ಈದ್ ಆಚರಿಸಲಾಗುತ್ತದೆ.
ಈದ್ ದಿನದಂದು ಯಾವೊಬ್ಬನೂ ಹಸಿವಿನಿಂದ ಇರಕೂಡದು ಎಂಬ ಉದ್ದೇಶದಿಂದ,ಆ ದಿನದಲ್ಲಿ ಫಿತರ್ ಝಕಾತ್ ಸಂಪ್ರದಾಯವನ್ನು ಕಡ್ಡಾಯಗೊಳಿಸಲಾಗಿದೆ. ಆಯಾ ಊರಿನಲ್ಲಿ ಸಾಮಾನ್ಯವಾಗಿ ಸೇವಿಸಲ್ಪಡುವ ಧಾನ್ಯಗಳನ್ನು ನಿರ್ದಿಷ್ಟ ಅಳತೆಯಲ್ಲಿ ಫಿತರ್ ಝಕಾತ್ ರೂಪದಲ್ಲಿ ನೀಡಬೇಕು.ಈದ್ ಎಂಬುದು ಪರಸ್ಪರ ಸ್ನೇಹ, ಸಹಬಾಳ್ವೆ ಸೌಹಾರ್ಧತೆಯನ್ನು ಸಾರುವ ಸಂಕೇತವಾಗಿದೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?