ಇಂದು ದಾರುನ್ನಜಾತ್ ಟಿಪ್ಪುನಗರ ಇದರ ಅಧೀನದಲ್ಲಿರುವ ಇಮಾಂ ಶಾಫಿಈ ಜುಮಾ ಮಸ್ಜಿದ್ ನಲ್ಲಿ ಈದುಲ್ ಫಿತ್ರ್ ಬಹಳ ಅದ್ದೂರಿಯಾಗಿ ನಡೆಸಲಾಯಿತು. ಈದ್ ನಮಾಜ್ ಮತ್ತು ಖುತುಬಾ ಬಳಿಕ ಶಮೀಮ್ ತಂಙಳ್ ಈದ್ ಸಂದೇಶವನ್ನು ಸಾರಿದರು.

ಈ ದಿನ ಬಹಳ ಪಾವಿತ್ರ್ಯತೆಯ ದಿನವಾಗಿದ್ದು 29 ದಿವಸ ಉಪವಾಸ ಹಿಡಿದು ಪುಣ್ಯಕರ್ಮಗಳ ಮೂಲಕ ಪವಿತ್ರತೆಗಳನ್ನು ಮೈಗೂಡಿಸಿ ಪೆರ್ನಾಲ್ ಆಚರಿಸುವುದರ ಜೊತೆಗೆ ಪ್ರವಾದಿ (ಸ ಅ)ರು ಮುಸ್ಲಿಮರಿಗೆ ತೋರಿಸಿಕೊಟ್ಟ ಆದರ್ಶವನ್ನು ಮೈಗೂಡಿಸಿಕೊಂಡು ಪ್ರೀತಿ ಸಹೋದರತೆಯನ್ನು ಹಂಚಿಕೊಂಡು ಕುಟುಂಬಗಳೊಂದಿಗೆ ಬಾಂಧವ್ಯಗಳು ಹೆಚ್ಚಿಸುವ ಮೂಲಕ ಅನಾಚಾರಗಳಿಗೆ ಕಡಿವಾಣ ಹಾಕುತ್ತಾ ನಾವೆಲ್ಲ ಸಮಾಜಕ್ಕೆ ಉತ್ತಮ ಸಂದೇಶ ನೀಡುವವರಾಗಬೇಕು ಎಂದು ಹೇಳಿದರು.
ಕೊನೆಯಲ್ಲಿ ಊರಿನಲ್ಲಿರುವ ಮತ್ತು ವಿದೇಶದಲ್ಲಿರುವ ಎಲ್ಲಾ ವಿಶ್ವಾಸಿಗಳಿಗೆ ನಮ್ಮ ಸಂಸ್ಥೆಯ ಎಲ್ಲಾ ಸಹಕಾರಿಗಳಿಗೆ ಪ್ರಾರ್ಥನೆ ನಡೆಸಿದರು ಎಂದು ಸಂಸ್ಥೆಯ
ಜನರಲ್ ಮ್ಯಾನೇಜರ್ ಹಾಜಿ ಹಮೀದ್ ಕೊಡಂಗಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ