ಇಂದು ದಾರುನ್ನಜಾತ್ ಟಿಪ್ಪುನಗರ ಇದರ ಅಧೀನದಲ್ಲಿರುವ ಇಮಾಂ ಶಾಫಿಈ ಜುಮಾ ಮಸ್ಜಿದ್ ನಲ್ಲಿ ಈದುಲ್ ಫಿತ್ರ್ ಬಹಳ ಅದ್ದೂರಿಯಾಗಿ ನಡೆಸಲಾಯಿತು. ಈದ್ ನಮಾಜ್ ಮತ್ತು ಖುತುಬಾ ಬಳಿಕ ಶಮೀಮ್ ತಂಙಳ್ ಈದ್ ಸಂದೇಶವನ್ನು ಸಾರಿದರು.

ಈ ದಿನ ಬಹಳ ಪಾವಿತ್ರ್ಯತೆಯ ದಿನವಾಗಿದ್ದು 29 ದಿವಸ ಉಪವಾಸ ಹಿಡಿದು ಪುಣ್ಯಕರ್ಮಗಳ ಮೂಲಕ ಪವಿತ್ರತೆಗಳನ್ನು ಮೈಗೂಡಿಸಿ ಪೆರ್ನಾಲ್ ಆಚರಿಸುವುದರ ಜೊತೆಗೆ ಪ್ರವಾದಿ (ಸ ಅ)ರು ಮುಸ್ಲಿಮರಿಗೆ ತೋರಿಸಿಕೊಟ್ಟ ಆದರ್ಶವನ್ನು ಮೈಗೂಡಿಸಿಕೊಂಡು ಪ್ರೀತಿ ಸಹೋದರತೆಯನ್ನು ಹಂಚಿಕೊಂಡು ಕುಟುಂಬಗಳೊಂದಿಗೆ ಬಾಂಧವ್ಯಗಳು ಹೆಚ್ಚಿಸುವ ಮೂಲಕ ಅನಾಚಾರಗಳಿಗೆ ಕಡಿವಾಣ ಹಾಕುತ್ತಾ ನಾವೆಲ್ಲ ಸಮಾಜಕ್ಕೆ ಉತ್ತಮ ಸಂದೇಶ ನೀಡುವವರಾಗಬೇಕು ಎಂದು ಹೇಳಿದರು.
ಕೊನೆಯಲ್ಲಿ ಊರಿನಲ್ಲಿರುವ ಮತ್ತು ವಿದೇಶದಲ್ಲಿರುವ ಎಲ್ಲಾ ವಿಶ್ವಾಸಿಗಳಿಗೆ ನಮ್ಮ ಸಂಸ್ಥೆಯ ಎಲ್ಲಾ ಸಹಕಾರಿಗಳಿಗೆ ಪ್ರಾರ್ಥನೆ ನಡೆಸಿದರು ಎಂದು ಸಂಸ್ಥೆಯ
ಜನರಲ್ ಮ್ಯಾನೇಜರ್ ಹಾಜಿ ಹಮೀದ್ ಕೊಡಂಗಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?