ಮಂಗಳೂರು: ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಬಿಜೆಪಿ ಪಕ್ಷದ ನಾರಿ ಶಕ್ತಿ ಸಮಾವೇಶದಲ್ಲಿ ಮಾಳವಿಕಾ ಅವಿನಾಶ್ ರವರು ದ.ಕ.ಜಿಲ್ಲೆಯ ಜನರ ರಕ್ತ ಕೇಸರಿ ಎಂದು ಹೇಳಿದ್ದಾರೆ.
ಮಾಳವಿಕಾರವರು ಅರಿತಿಲ್ಲ ದ.ಕ.ಜಿಲ್ಲೆಯ ಜನರನ್ನು ಮತೀಯ ಸಂಕೇತ,ಚಿಹ್ನೆ, ಪದಬಳಕೆಗಳನ್ನು ಹರಿಬಿಟ್ಟು ಇಲ್ಲಿನ ಜನತೆಯನ್ನು ಆ ಕಾರಣಕ್ಕಾಗಿ ವಿಭಜಿಸಿ ಘರ್ಷಣೆಗೆ ಎಳೆದು ಹಾಕಿ, ಫಸಲು ಕೊಯ್ಯುವ ಕಾರ್ಯ ಎಂದು. ಮಾಳವಿಕಾ ಅವರು ತಿಳಿಯಲಿ, ದ.ಕ.ಜಿಲ್ಲೆಯ ಜನರ ರಕ್ತ ಕೇಸರಿ ಅಲ್ಲ,ಅದು ಕೆಂಪು ಆಗಿಯೇ ಉಳಿದಿದೆ . ಆದರೆ ಜಿಲ್ಲೆಯ ಅಸ್ಮಿತೆಯ ಬಗ್ಗೆ ಲವ ಲೇಶವೂ ತಿಳಿಯದ ಮಾಳವಿಕಾ ರವರ ಕಣ್ಣು ಹಳದಿ ಆಗಿದೆ, ಆದುದರಿಂದಲೇ ಮಾಳವಿಕಾ ರವರು ಕೇಸರಿ ಅಲ್ಲದ ತನ್ನ ರಕ್ತ ಕೆಂಪು ಎಂದು ಗೊತ್ತಿದ್ದರೂ ದ.ಕ.ಜಿಲ್ಲೆಯ ಜನರ ರಕ್ತದ ಬಣ್ಣವನ್ನು ಬದಲಿಸಲು ಹೊರಟಿದ್ದಾರೆ ಎಂದು ಕೆ.ಅಶ್ರಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಳವಿಕಾ ರಂತಹ ಹಳದಿ ಕಣ್ಣಿನ ನಾರಿಗಳು ಭಾರತದಲ್ಲಿರುವುದರಿಂದಲೇ ದ.ಕ.ಜಿಲ್ಲೆಯ ಜನರ ರಕ್ತವನ್ನು ಕಪ್ಪು ಬಣ್ಣಕ್ಕೆ ಹೆಪ್ಪು ಗಟ್ಟಿಸುವ ಈ ಹಿಂದಿನ ಹಲವು ಪ್ರಯತ್ನಗಳಿಂದಲೇ ಅಮಾಯಕ ಮುಗ್ಧ ಜನರು ಜಾತಿ ಧರ್ಮದ ಹೆಸರಲ್ಲಿ ಪ್ರಾಣ ಹಾನಿ ಗೊಳಗಾಗಲು ಕಾರಣ. ಮಾಳವಿಕಾ ಇನ್ನಾದರೂ ತನ್ನ ಹಳದಿ ಕಣ್ಣಿನಿಂದ ದ.ಕ.ಜಿಲ್ಲೆ ಮಾತ್ರವಲ್ಲ ಇಡೀ ದೇಶದ ಜನರ ರಕ್ತ ಕೆಂಪು ಎಂದು ಅರಿತು ಅದನ್ನು ಹೆಪ್ಪುಗಟ್ಟುವ ಕಪ್ಪು ಬಣ್ಣಕ್ಕೆ ತಿರುಗಿಸದಿರುವ ಕಾರ್ಯಕ್ಕೆ ಮುಂದಾಗಲಿ ಎಂದು ಕೆ.ಅಶ್ರಫ್( ಮಾಜಿ ಮೇಯರ್) ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?