ಮುಂಬೈ: ಪಶ್ಚಿಮ ಮಹಾರಾಷ್ಟ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರಾಶೀಲ ಮೋಹಿತೆ ಪಾಟೀಲ್ ಪಕ್ಷ ತೊರೆದು ಶರದ್ ಪವಾರ್ ನೇತೃತ್ವದ ಎನ್ಸಿಪಿ ಸೇರ್ಪಡೆ ಯಾಗಿದ್ದಾರೆ.
ಮಾಡಾ ಕ್ಷೇತ್ರದಲ್ಲಿ ಅವರು ಅಭ್ಯರ್ಥಿಯಾಗಬಹುದು ಎಂದು ವರದಿಯಾಗಿದೆ . ಇದು ಚುನಾವಣಾ ದೃಷ್ಟಿಯಿಂದ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಮೋಹಿತೆ ಪಾಟೀಲ್ ಅವರು ಈ ಪ್ರದೇಶದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸೇರಿದವರು.
ಮೋಹಿತೆ ಪಾಟೀಲ್ ಕುಟುಂಬವು ಮಾದ ಕ್ಷೇತ್ರ ಒಳಗೊಂಡಿರುವ ಸೋಲಾಪುರ ಜಿಲ್ಲೆಯಲ್ಲಿ 100 ಶಾಲೆಗಳು ಮತ್ತು ಅನೇಕ ವೃತ್ತಿಪರ ಕಾಲೇಜುಗಳನ್ನು ಹೊಂದಿದೆ. 3 ಸಕ್ಕರೆ ಸಹಕಾರ ಸಂಘಗಳು ಇವರ ಕುಟುಂಬದ ನಿಯಂತ್ರಣ ದಲ್ಲಿವೆ. ಧರಾಶೀಲ್ ಅವರ ಚಿಕ್ಕಪ್ಪ ವಿಜಯ್ ಸಿಂಗ್ ಮೋಹಿತೆ ಪಾಟೀಲ್ ಅವರು ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ. ಅವರ ಬೆಂಬಲವೂ ಇದೆ.
ಹಾಲಿ ಸಂಸದ ರಂಜಿತ್ ಸಿಂಗ್ ನಾಯಕ್ ನಿಂಬಾಳ್ಕರ್ ಮಾಡಾ ಬಿಜೆಪಿ ಅಭ್ಯರ್ಥಿ. ಈ ಕ್ಷೇತ್ರವು ಪವಾರ್ ಕುಟುಂಬದ ಸ್ಥಾನವಾದ ಬಾರಾಮತಿಗೆ ಹೊಂದಿಕೊಂಡಿರುವ ಕ್ಷೇತ್ರ ವಾಗಿದೆ .















ಇನ್ನಷ್ಟು ಸುದ್ದಿಗಳು
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ