ಚುರಚಂದಪುರ: ನರಮೇಧ ನಡೆದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮರುಕಳಿಸಿದ್ದು, ರಾಜ್ಯದಲ್ಲಿ ಇನ್ನಷ್ಟು ಕುಕಿ ಸಂಘಟನೆಗಳು ಲೋಕಸಭೆ ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿವೆ.
‘ನ್ಯಾಯವಿಲ್ಲದಿದ್ದರೆ ಮತವೂ ಇಲ್ಲ’ ಎಂಬುದು ಅವರ ನಿಲುವು. ಬಹಿಷ್ಕಾರದ ಭಾಗವಾಗಿ ಅಭ್ಯರ್ಥಿಗಳನ್ನು ನಿಲ್ಲಿಸುತ್ತಿಲ್ಲ ಎಂದು ಕುಕೀಸ್ ಈ ಹಿಂದೆ ಘೋಷಿಸಿತ್ತು. ಕುಕಿ ನೇಷನ್ಸ್ ಅಸೆಂಬ್ಲಿ ಮತ್ತು ಕುಕಿ ಐಎನ್ಪಿಐ ಸಂಘಟನೆಗಳು ಚುನಾವಣೆಯಿಂದ ವಿಮುಖವಾಗಿವೆ ಮಣಿಪುರದಲ್ಲಿ ಏಪ್ರಿಲ್ 19 ಮತ್ತು 26 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ರಾಜ್ಯದಲ್ಲಿ ಈ ಬಾರಿ ಪೋಸ್ಟರ್, ಜಾಥಾ ಸದ್ದುಗದ್ದಲವಿಲ್ಲದ ಚುನಾವಣೆ ನ ಡೆಸಲು ಸೂಚಿಸಲಾಗಿದೆ.
ಪೂರ್ವ ಇಂಫಾಲ್ ಜಿಲ್ಲೆಯಲ್ಲಿ ಶನಿವಾರ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಶುಕ್ರವಾರ ತೆಂಗನೌಪಾಲ್ ಜಿಲ್ಲೆಯಲ್ಲಿ ಸಶಸ್ತ್ರ ಗುಂಪುಗಳ ನಡುವೆ ನಡೆದ ಎನ್ಕೌಂಟರ್ನಲ್ಲಿ ಮೂವರು ಗಾಯಗೊಂಡಿದ್ದಾರೆ.
ಚೀನಾ ಮತ್ತು ಪಾಕಿಸ್ತಾನದ ಬೆದರಿಕೆಯನ್ನು ಎದುರಿಸಲು ಸಮರ್ಥವಾಗಿರುವ ಭಾರತೀಯ ಸೇನೆಯು ಮುಗ್ಧ ನಾಗರಿಕರನ್ನು ಭಯೋತ್ಪಾದಕರಿಂದ ರಕ್ಷಿಸುವಲ್ಲಿ ವಿಫಲವಾಗುತ್ತಿರುವುದು ಅತ್ಯಂತ ನಿರಾಶಾದಾಯಕವಾಗಿದೆ ಎಂದು ಕುಕಿ ರಾಷ್ಟ್ರೀಯ ಅಸೆಂಬ್ಲಿಯ ವಕ್ತಾರ ಮಾಂಗೆ ಬಾಯಿ ಹಾಕಿಪ್ ಹೇಳಿದ್ದಾರೆ.
ಇದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಎಂಬ ಹೆಗ್ಗಳಿಕೆ ಯನ್ನೂ ಭಾರತದ ಸಂವಿಧಾನದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳಲು ಕಾರಣವಾದೀತು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಅಸಮಾಧಾನವನ್ನು ಮುಖಂಡರಿಗೆ ತಿಳಿಸಲಾಗಿದೆ.
ಭಾರತೀಯ ನಾಯಕತ್ವದ ವಿರುದ್ಧ ತಮ್ಮ ಕೋಪವನ್ನು ವ್ಯಕ್ತಪಡಿಸಲು ತಾವು ಚುನಾವಣೆಯಿಂದ ದೂರವಿರಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ . ನಮ್ಮ ನೋವು ಮತ್ತು ಸಂಕಟಗಳನ್ನು ಜಗತ್ತಿಗೆ ತಿಳಿಸಲು ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಹಾಕಿಪ್ ಹೇಳಿದರು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ