ಲೊಕಸಭೆಗೆ ನಡೆಯುತ್ತಿರುವ ಮಹಾ ಚುನಾವಣೆಯು ಭಾರತದ ಭವಿಷ್ಯತ್ತನ್ನು ನಿರ್ಣಯಿಸುವ ಚುನಾವಣೆಯಾಗಿರುವುದರಿಂದ ಪ್ರತಿಯೊಬ್ಬರ ಹಕ್ಕಾದ ಮತದಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಹಕ್ಕು ಚಲಾಯಿಸಬೇಕು.
ಎಪ್ರಿಲ್ 26 ಮತ್ತು ಮೇ 7 ದಿನಾಂಕಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ಆ ದಿನಗಳಲ್ಲಿ ಇತರ ಯಾವುದೇ ಕಾರ್ಯಕ್ರಮಗಳನ್ನಿಡದೇ ಸಂಪೂರ್ಣವಾಗಿ ಮತದಾನದಲ್ಲಿ ಭಾಗವಹಿಸಬೇಕು ಹಾಗೂ ಸಖಾಫಿ ವಿದ್ವಾಂಸರೆಲ್ಲರೂ ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಗಳನ್ನು ಮಾಡಬೇಕೆಂದು.
ದಿನಾಂಕ17/04/2024 ರಂದು ಮಂಗಳೂರು ಅಡ್ಯಾರು ಕಣ್ಣೂರು ಸಖಾಫಿ ಕೌನ್ಸಿಲ್ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಕರೆ ಕೊಡಲಾಯಿತು.
ರಾಜ್ಯಾಧ್ಯಕ್ಷ ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಕೆಕೆಎಂ ಕಾಮಿಲ್ ಸಖಾಫಿಯವರು ಸ್ವಾಗತಿಸಿ ಹಾಮೀಮ್ ತಂಙಳ್ ದುಆ ನಿರ್ವಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹ್ಬೂಬ್ ಸಖಾಫಿ ಕಿನ್ಯ,ಕೋಶಾಧಿಕಾರಿ ಸತ್ತಾರ್ ಸಖಾಫಿ ಬೆಳ್ಳಾರೆ ರಶೀದ್ ಸಖಾಫಿ ಮಜೂರು, ಕಾರ್ಯದರ್ಶಿಗಳಾದ ಸತ್ತಾರ್ ಸಖಾಫಿ ಅಡ್ಯಾರು ಪದವು, ಬೇಂಗಿಲ ಮುಸ್ತಫಾ ಸಖಾಫಿ ಶಾಫಿ ಸಖಾಫಿ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ