ಕುವೈತ್ ಸಿಟಿ: ಮ್ಯಾನ್ಪವರ್ ಸಾರ್ವಜನಿಕ ಪ್ರಾಧಿಕಾರ ಬೇಸಿಗೆಯ ತೀವ್ರತೆಯಲ್ಲಿ ತೆರೆದ ಸ್ಥಳಗಳಲ್ಲಿ ಮದ್ಯಾಹ್ನದ ಕೆಲಸವನ್ನು ನಿಷೇಧಿಸಲು ನಿರ್ಧರಿಸಿದೆ. ಜೂನ್ 1 ರಿಂದ ಆಗಸ್ಟ್ 31ರವರೆಗೆ ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯ ವರೆಗೆ ಕಾರ್ಮಿಕರಿಗೆ ಕಡ್ಡಾಯ ಬಿಡುವಿಗೆ ಅನುಮತಿ ನೀಡಿದೆ.ಬೇಸಿಗೆಯ ಉಷ್ಣತೆ ಏರುವಾಗ ಸೂರ್ಯ ತಾಪವು ನೇರವಾಗಿ ಆಘಾತ ನೀಡುವುದನ್ನು ತಡೆಯುವುದಾಗಿದೆ ಗುರಿ.
ಈ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎನ್ನುವ ಬಗ್ಗೆ ತೀವ್ರ ತಪಾಸಣೆ ನಡೆಸಲಾಗುವುದು ಎಂದು ಮ್ಯಾನ್ ಪವರ್ ಅಥಾರಿಟಿ ಎಚ್ಚರಿಸಿದೆ.ಅದೇ ಸಮಯದಲ್ಲಿ, ಕಾನೂನು ಉಲ್ಲಂಘನೆಯ ಸೂಚನೆ ಲಭಿಸಿದ್ದಲ್ಲಿ ಮೊದಲ ಬಾರಿಗೆ ನೋಟೀಸು ಹೊರಡಿಸಲಿದೆ. ಪುನರಾವರ್ತಿತ ಅಪರಾಧಕ್ಕೆ ಪ್ರತೀಯೋರ್ವ ಕಾರ್ಮಿಕನಿಗೆ 100 ದಿನಾರ್ ದಂಡವನ್ನು ಮಾಲೀಕರು ನೀಡಬೇಕಾಗುತ್ತದೆ.
ಕಾನೂನಿನ ನಿಯಮಗಳನ್ನು ಉಲ್ಲಂಘಿಸುವರ ಫೈಲ್ಗಳನ್ನು ನಿಷ್ಕ್ರಿಯ ಗೊಳಿಸುವುದು ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.ಕಾರ್ಮಿಕ ಮತ್ತು ಸಮಾಜ ಕಲ್ಯಾಣ ಸಚಿವಾಲಯದ ವಿಶೇಷ ಸಮಿತಿಯು ಈ ಬಗ್ಗೆ ಪರಿಶೋಧನೆ ನಡೆಸಲಿದೆ ಎಂದು ಮ್ಯಾನ್ ಪವರ್ ಸಾರ್ವಜನಿಕ ಪ್ರಾಧಿಕಾರ ಎಚ್ಚರಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ