ಕಿನ್ಯಾ:, ಬುಖಾರಿ ಎಜುಕೇಶನಲ್ & ಚಾರಿಟಿ ಸೆಂಟರ್ ಕಿನ್ಯ ಅಧೀನ ಕೂಡಾರ ಗೌಸೀಯ ನಗರದಲ್ಲಿ ನೂತನವಾಗಿ ನಿರ್ಮಿಸಿದ ಮದ್ರಸ ಕಟ್ಟಡದ ಉದ್ಘಾಟನೆಯನ್ನು ನಾಳೆ (28/04/2024, ಆದಿತ್ಯವಾರ) ಬೆಳಿಗ್ಗೆ 8:00 ಕ್ಕೆ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ನಿರ್ವಹಿಸಲಿದ್ದಾರೆ.

ಸಂಜೆ 5:00 ಕ್ಕೆ ಪೊಸೋಟ್ ಮಳ್ಹರ್ ವಿಧ್ಯಾ ಸಮುಚ್ಚಯದ ಪ್ರಧಾನ ಕಾರ್ಯದರ್ಶಿ ಸಯ್ಯಿದ್ ಜಲಾಲುದ್ದೀನ್ ಸಅದಿ ಅಲ್ ಬುಖಾರಿ ತಂಙಳ್ ನೇತೃತ್ವದಲ್ಲಿ ನಡೆಯಲಿರುವ ಸುನ್ನೀ ಸಂಗಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಸಯ್ಯಿದ್ ಅಲವಿ ತಂಙಳ್ ದುಆ ನಡೆಸುವರು, ಬುಖಾರಿ ಎಜುಕೇಶನಲ್ ಚಾರಿಟಿ & ಸೆಂಟರ್ ಅಧ್ಯಕ್ಷ ಅಶ್ಅರಿಯ್ಯಾ ಮುಹಮ್ಮದ್ ಅಲಿ ಸಖಾಫಿ ರವರ ಅಧ್ಯಕ್ಷತೆಯಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ,ಖ್ಯಾತ ವಾಗ್ಮಿ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಮುಖ್ಯ ಪ್ರಭಾಷಣ ಗೈಯ್ಯಲಿರುವರು.
ನೂತನ ಮದ್ರಸವು ಕಿನ್ಯ ದರ್ಸಲ್ಲಿ ಧಾರ್ಮಿಕ ಶಿಕ್ಷಣ ಪಡೆದು ಧಾರ್ಮಿಕ ಕ್ಷೇತ್ರದ ಅತ್ಯುನ್ನತ ಪ್ರತಿಷ್ಠಿತ ಖಾಝಿ ಪದವಿಯನ್ನು ಅಲಂಕರಿಸಿ ನೂರಾರು ವಿದ್ವಾಂಸರನ್ನು ಸಮುದಾಯಕ್ಕೆ ಸಮರ್ಪಿಸಿ ಇತ್ತೀಚೆಗೆ ಅಗಲಿರುವ ಮರ್ಹೂಂ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್ ರವರ ಸ್ಮರಣಾರ್ಥ ಅವರ ಗೌರವ ನಾಮ ‘ತಾಜುಲ್ ಫುಖಹಾಅ್ ಮದ್ರಸ’ ಕೂಡಾರದಲ್ಲಿ ಕಾರ್ಯಾಚರಿಸಲಿದೆ ಎಂದು ಸೆಂಟರ್ ಪ್ರಧಾನ ಕಾರ್ಯದರ್ಶಿ ಕೆ.ಎಚ್ ಇಸ್ಮಾಈಲ್ ಸಅದಿ ಕಿನ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ