ಕಿನ್ಯಾ:, ಬುಖಾರಿ ಎಜುಕೇಶನಲ್ & ಚಾರಿಟಿ ಸೆಂಟರ್ ಕಿನ್ಯ ಅಧೀನ ಕೂಡಾರ ಗೌಸೀಯ ನಗರದಲ್ಲಿ ನೂತನವಾಗಿ ನಿರ್ಮಿಸಿದ ಮದ್ರಸ ಕಟ್ಟಡದ ಉದ್ಘಾಟನೆಯನ್ನು ನಾಳೆ (28/04/2024, ಆದಿತ್ಯವಾರ) ಬೆಳಿಗ್ಗೆ 8:00 ಕ್ಕೆ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ನಿರ್ವಹಿಸಲಿದ್ದಾರೆ.

ಸಂಜೆ 5:00 ಕ್ಕೆ ಪೊಸೋಟ್ ಮಳ್ಹರ್ ವಿಧ್ಯಾ ಸಮುಚ್ಚಯದ ಪ್ರಧಾನ ಕಾರ್ಯದರ್ಶಿ ಸಯ್ಯಿದ್ ಜಲಾಲುದ್ದೀನ್ ಸಅದಿ ಅಲ್ ಬುಖಾರಿ ತಂಙಳ್ ನೇತೃತ್ವದಲ್ಲಿ ನಡೆಯಲಿರುವ ಸುನ್ನೀ ಸಂಗಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಸಯ್ಯಿದ್ ಅಲವಿ ತಂಙಳ್ ದುಆ ನಡೆಸುವರು, ಬುಖಾರಿ ಎಜುಕೇಶನಲ್ ಚಾರಿಟಿ & ಸೆಂಟರ್ ಅಧ್ಯಕ್ಷ ಅಶ್ಅರಿಯ್ಯಾ ಮುಹಮ್ಮದ್ ಅಲಿ ಸಖಾಫಿ ರವರ ಅಧ್ಯಕ್ಷತೆಯಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ,ಖ್ಯಾತ ವಾಗ್ಮಿ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಮುಖ್ಯ ಪ್ರಭಾಷಣ ಗೈಯ್ಯಲಿರುವರು.
ನೂತನ ಮದ್ರಸವು ಕಿನ್ಯ ದರ್ಸಲ್ಲಿ ಧಾರ್ಮಿಕ ಶಿಕ್ಷಣ ಪಡೆದು ಧಾರ್ಮಿಕ ಕ್ಷೇತ್ರದ ಅತ್ಯುನ್ನತ ಪ್ರತಿಷ್ಠಿತ ಖಾಝಿ ಪದವಿಯನ್ನು ಅಲಂಕರಿಸಿ ನೂರಾರು ವಿದ್ವಾಂಸರನ್ನು ಸಮುದಾಯಕ್ಕೆ ಸಮರ್ಪಿಸಿ ಇತ್ತೀಚೆಗೆ ಅಗಲಿರುವ ಮರ್ಹೂಂ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್ ರವರ ಸ್ಮರಣಾರ್ಥ ಅವರ ಗೌರವ ನಾಮ ‘ತಾಜುಲ್ ಫುಖಹಾಅ್ ಮದ್ರಸ’ ಕೂಡಾರದಲ್ಲಿ ಕಾರ್ಯಾಚರಿಸಲಿದೆ ಎಂದು ಸೆಂಟರ್ ಪ್ರಧಾನ ಕಾರ್ಯದರ್ಶಿ ಕೆ.ಎಚ್ ಇಸ್ಮಾಈಲ್ ಸಅದಿ ಕಿನ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ