ಬೆಳ್ತಂಗಡಿ (ಮೆ-8): ಹಿರಿಯ ರಾಜಕಾರಣಿಗಳು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ. ವಸಂತ ಬಂಗೇರ ಅವರ ನಿಧನ ಸುದ್ದಿ ನೋವು ತಂದಿದೆ. ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ (79ವ) ಅವರ ಅಗಲುವಿಕೆ ರಾಜಕೀಯ ಕ್ಷೇತ್ರಕ್ಕೆ ಹಾಗೂ ಬೆಳ್ತಂಗಡಿ ಜನತೆಗೆ ತುಂಬಲಾರದ ನಷ್ಟ.
ರಾಜ್ಯದ ಸಚೇತಕರಾಗಿ, ಶಾಸಕರಾಗಿ ಅವರು ಸಲ್ಲಿಸಿದ ಸೇವೆ ಸದಾ ನೆನಪಿನಲ್ಲಿ ಉಳಿಯುವಂತಹದ್ದು ಎಂದು ಎಸ್ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ ತಮ್ಮ ಸಂತಾಪ ಸೂಚಿಸಿದ್ದಾರೆ.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಓರ್ವರಾಗಿ ಕೊಡುಗೈ ದಾನಿಯಾಗಿಯಾಗಿದ್ದರು.
ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ವಸಂತ ಬಂಗೇರ ಅವರ ಕುಟುಂಬದವರಿಗೆ ಅಭಿಮಾನಿಗಳಿಗೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ. ವಸಂತ ಬಂಗೇರ ಅವರ ನಿಧನಕ್ಕೆ ಎಸ್ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ