ನವದೆಹಲಿ | 50 ದಿನಗಳ ಸೆರೆವಾಸದ ನಂತರ ಅರವಿಂದ ಕೇಜ್ರಿವಾಲ್ ಜೈಲಿನಿಂದ ಹೊರಬಂದರು. ತಿಹಾರ್ ಜೈಲಿನ ಗೇಟ್ ನಂ.4ರ ಮೂಲಕ ಅವರನ್ನು ಬಿಡುಗಡೆ ಮಾಡಲಾಯಿತು. ಜೈಲಿನಿಂದ ಹೊರಬಂದ ಕೇಜ್ರವಾಲ್ಗೆ ಆಮ್ ಆದ್ಮ ಪಕ್ಷದ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.
ಹೊರಬಂದ ನಂತರ ಕೇಜ್ರಿವಾಲ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು. ನಾನು ಹೇಳಿದಂತೆಯೇ ಹಿಂತಿರುಗಿದ್ದೇನೆ. ದೇಶವನ್ನು ಸರ್ವಾಧಿಕಾರದಿಂದ ಪಾರು ಮಾಡಬೇಕು, ಇದಕ್ಕಾಗಿ ದೇಶದ 140 ಕೋಟಿ ಜನರು ಒಟ್ಟಾಗಿ ಹೋರಾಡಬೇಕು ಎಂದು ದೇಶದ ಜನತೆಗೆ ಅವರು ಕರೆ ನೀಡಿದರು.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ತಿಹಾರ್ ಜೈಲಿನ ಮುಂದೆ ಕೇಜ್ರವಾಲ್ ಅವರನ್ನು ಬರಮಾಡಿಕೊಂಡರು. ಅಬಕಾರಿ ನೀತಿ ಹಗರಣ ಸಂಬಂಧ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲ ಹೊತ್ತಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಹೊರಬಂದರು.
ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಸುಪ್ರೀಂ ಕೋರ್ಟ್ ಜೂನ್ 1ರ ತನಕ ಮಧ್ಯಂತರ ಜಾಮೀನು ಮಂಜೂರುಗೊಳಿಸಿದೆ.
ಅಂತಿಮ ಹಂತದ ಮತದಾನ ನಡೆಯುವ ತನಕ ಅವರಿಗೆ ಮಧ್ಯಂತರ ಜಾಮೀನು ದೊರಕಿದ್ದು ಜೂನ್ 2ರಂದು ಜೈಲಿಗೆ ವಾಪಸಾಗಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಕೇಜ್ರವಾಲ್ ಅವರನ್ನು ಬಂಧಿಸಿತ್ತು.
ತಮ್ಮ ಬಂಧನವನ್ನು ಪ್ರಶ್ನಿಸಿ ಹಾಗೂ ಲೋಕಸಭಾ ಚುನಾವಣೆಗೆ ಪ್ರಚಾರ ಮಾಡಲು ಅನುವು ಮಾಡಿಕೊಡಲು ಜಾಮೀನು ಒದಗಿಸಬೇಕೆಂಬ ಕೇಜ್ರವಾಲ್ ಅವರ ಅರ್ಜಿಗೆ ಜಾರಿ ನಿರ್ದೇಶನಾಲಯ ಆಕ್ಷೇಪಿಸಿತ್ತು.
ಜಸ್ಟಿಸ್ ಸಂಜೀವ್ ಖನ್ನಾ ಮತ್ತು ಜಸ್ಟಿಸ್ ದೀಪಾಂಕರ್ ದತ್ತಾ ಅವರ ಪೀಠ ಇಂದು ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಒಪ್ಪಿದೆ. ಜೂನ್ 2ರಂದು ಶರಣಾಗಬೇಕೆಂದು ನ್ಯಾಯಾಲಯ ಸೂಚಿಸಿದೆ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ