ಪುತ್ತೂರು: ಮರ್ಕಝುಲ್ ಹುದಾ ಮಹಿಳಾ ಕಾಲೇಜು ಕುಂಬ್ರ ಇದರ ಬೆಳ್ಳಿ ಹಬ್ಬದ ಉದ್ಘಾಟನೆ ಮತ್ತು ಶರೀಅತ್ ವಿಭಾಗದಲ್ಲಿ ಕಲಿತ 240 ವಿದ್ಯಾರ್ಥಿನಿಯರಿಗೆ ಅಲ್ ಮಾಹಿರಾ ಪದವಿ ಪ್ರದಾನ ಸಮಾವೇಶ 2024 ಮೇ 16 ಗುರುವಾರದಂದು ಕುಂಬ್ರ ಮರ್ಕಝ್ ಕ್ಯಾಂಪಸ್ ನಲ್ಲಿ ನಡೆಯಲಿದೆ.
ಬೆಳಿಗ್ಗೆ 9 ರಿಂದ ಮದ್ಯ್ಯಾಹ್ನ 1ರ ತನಕ ಮಹಿಳಾ ಸಮಾವೇಶ ನಡೆಯಲಿದ್ದು, ಅಪರಾಹ್ನ 4 ರಿಂದ 6 ರ ತನಕ ಕೇರಳದ ಖ್ಯಾತ ಬುರ್ದಾ ಗಾಯಕ ಡಾಕ್ಟರ್ ಕೋಯಾ ಕಾಪಾಡ್ ಬಳಗದಿಂದ “ಖವಾಲಿ ಸಂಜೆ” ಕಾರ್ಯಕ್ರಮ ನಡೆಯಲಿದೆ.
ಮಗ್ರಿಬ್ ನಮಾಜ್ ಬಳಿಕ ನಡೆಯುವ ಸಮಾರೋಪ ಸಮ್ಮೇಳನದಲ್ಲಿ ಮುಖ್ಯ ಭಾಷಣಗಾರರಾಗಿ ಮೌಲಾನಾ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಉಸ್ತಾದರು ಆಗಮಿಸಲಿದ್ದು, ಅಲ್ಲದೇ ಸಾದಾತರು, ವಿದ್ವಾಂಸರು, ಸಾಮಾಜಿಕ, ಶೈಕ್ಷಣಿಕ ಚಿಂತಕರು ಭಾಗವಹಿಸಲಿದ್ದಾರೆ.
ಆದ್ದರಿಂದ ದಕ್ಷಿಣ ಕನ್ನಡ ಈಸ್ಟ್ ಜಿಲ್ಲೆಯಾದ್ಯಂತ ಬರುವ ಎಲ್ಲಾ ಸುನ್ನಿ ಸಂಘಟನಾ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಹಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ಈಸ್ಟ್ ಜಿಲ್ಲಾಧ್ಯಕ್ಷರಾದ ಅರಿಯಡ್ಕ ಅಬ್ದುಲ್ ರಹ್ಮಾನ್ ಹಾಜಿರವರು ಕರೆ ನೀಡಿದ್ದಾರೆಂದು ಯೂಸುಫ್ ಸಯೀದ್ ಪುತ್ತೂರು
(ಮಾಧ್ಯಮ ಕಾರ್ಯದರ್ಶಿ, ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲೆ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ