ಮಕ್ಕಳಲ್ಲಿ ಕಲೆ, ಸಾಹಿತ್ಯ ಮತ್ತು ಕೌಶಲ್ಯಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಜಾದಿನಗಳನ್ನು ಸದ್ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಸಲುವಾಗಿ ಎಸೆಸ್ಸೆಫ್ ಕಲ್ಲುಗುಂಡಿ ಶಾಖೆಯ ವತಿಯಿಂದ ಸಮ್ಮರ್ ಕ್ಯಾಂಪ್ ಮತ್ತು ಪ್ರತಿಭಾ ಪುರಸ್ಕಾರ ದಿನಾಂಕ 25.05.2024 ರಂದು ಕಲ್ಲುಗುಂಡಿ ಸುನ್ನೀ ಸೆಂಟರ್ ನಲ್ಲಿ ನಡೆಯಿತು. ಕಲ್ಲುಗುಂಡಿ, ಸಂಪಾಜೆ ಮತ್ತು ಕೊಯನಾಡುವಿನಿಂದ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಯೋಜನ ಪಡೆದುಕೊಂಡರು.


ಶಾಖಾ ವ್ಯಾಪ್ತಿಯಲ್ಲಿ ಉತ್ತಮ ಅಂಕ ಗಳಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಾದ ಅಜ್ಮಲ್ ಸಿನಾನ್ (564), ಪಿಯುಸಿ ವಿದ್ಯಾರ್ಥಿಗಳಾದ ನಿಶಾದ್ (574), ಖದೀಜತ್ ರಂಝೀನಾ(560), ಅನುಷ್(542), ಅಫೀದಾ ಫಾತಿಮಾ (527), ಅಜ್ಮಲ್ (524), ಅಜ್ನಾಸ್ (513), ಶಿಫಾನ (510) ಮತ್ತು ತಸ್ನೀಮಾ(504) ಎಂಬವರಿಗೆ ಅವರ ಸಾಧನೆಯನ್ನು ಗುರುತಿಸಿ ಸನ್ಮಾನ ಮಾಡಲಾಯಿತು.
ಶಾಖಾಧ್ಯಕ್ಷರಾದ ಆಶಿಕ್ ಕೆ ಹೆಚ್ ರವರ ಅಧ್ಯಕ್ಷತೆಯಲ್ಲಿ ಅತಿಥಿಗಳಾಗಿ ಎಸ್. ವೈ. ಎಸ್ ನಾಯಕರಾದ ಸಿದ್ದೀಕ್ ಕಟ್ಟೆಕಾರ್, ಸುಳ್ಯ ಸೆಕ್ಟರ್ ಮಾಜಿ ಅಧ್ಯಕ್ಷರಾದ ಜಾಬಿರ್ ಗೂನಡ್ಕ ಹಾಗೂ ಎಸ್. ವೈ. ಎಸ್. ಕಲ್ಲುಗುಂಡಿ ಪ್ರಧಾನ ಕಾರ್ಯದರ್ಶಿ ಫೈಝಲ್ ಝುಹ್ರಿ ಭಾಗವಹಿಸಿದರು.
ಶಾಖಾ ಪ್ರಧಾನ ಕಾರ್ಯದರ್ಶಿ ರುನೈಝ್ ಸ್ವಾಗತಿಸಿ, ಸ್ವಾದಿಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್