ಮಕ್ಕಳಲ್ಲಿ ಕಲೆ, ಸಾಹಿತ್ಯ ಮತ್ತು ಕೌಶಲ್ಯಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಜಾದಿನಗಳನ್ನು ಸದ್ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಸಲುವಾಗಿ ಎಸೆಸ್ಸೆಫ್ ಕಲ್ಲುಗುಂಡಿ ಶಾಖೆಯ ವತಿಯಿಂದ ಸಮ್ಮರ್ ಕ್ಯಾಂಪ್ ಮತ್ತು ಪ್ರತಿಭಾ ಪುರಸ್ಕಾರ ದಿನಾಂಕ 25.05.2024 ರಂದು ಕಲ್ಲುಗುಂಡಿ ಸುನ್ನೀ ಸೆಂಟರ್ ನಲ್ಲಿ ನಡೆಯಿತು. ಕಲ್ಲುಗುಂಡಿ, ಸಂಪಾಜೆ ಮತ್ತು ಕೊಯನಾಡುವಿನಿಂದ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಯೋಜನ ಪಡೆದುಕೊಂಡರು.


ಶಾಖಾ ವ್ಯಾಪ್ತಿಯಲ್ಲಿ ಉತ್ತಮ ಅಂಕ ಗಳಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಾದ ಅಜ್ಮಲ್ ಸಿನಾನ್ (564), ಪಿಯುಸಿ ವಿದ್ಯಾರ್ಥಿಗಳಾದ ನಿಶಾದ್ (574), ಖದೀಜತ್ ರಂಝೀನಾ(560), ಅನುಷ್(542), ಅಫೀದಾ ಫಾತಿಮಾ (527), ಅಜ್ಮಲ್ (524), ಅಜ್ನಾಸ್ (513), ಶಿಫಾನ (510) ಮತ್ತು ತಸ್ನೀಮಾ(504) ಎಂಬವರಿಗೆ ಅವರ ಸಾಧನೆಯನ್ನು ಗುರುತಿಸಿ ಸನ್ಮಾನ ಮಾಡಲಾಯಿತು.
ಶಾಖಾಧ್ಯಕ್ಷರಾದ ಆಶಿಕ್ ಕೆ ಹೆಚ್ ರವರ ಅಧ್ಯಕ್ಷತೆಯಲ್ಲಿ ಅತಿಥಿಗಳಾಗಿ ಎಸ್. ವೈ. ಎಸ್ ನಾಯಕರಾದ ಸಿದ್ದೀಕ್ ಕಟ್ಟೆಕಾರ್, ಸುಳ್ಯ ಸೆಕ್ಟರ್ ಮಾಜಿ ಅಧ್ಯಕ್ಷರಾದ ಜಾಬಿರ್ ಗೂನಡ್ಕ ಹಾಗೂ ಎಸ್. ವೈ. ಎಸ್. ಕಲ್ಲುಗುಂಡಿ ಪ್ರಧಾನ ಕಾರ್ಯದರ್ಶಿ ಫೈಝಲ್ ಝುಹ್ರಿ ಭಾಗವಹಿಸಿದರು.
ಶಾಖಾ ಪ್ರಧಾನ ಕಾರ್ಯದರ್ಶಿ ರುನೈಝ್ ಸ್ವಾಗತಿಸಿ, ಸ್ವಾದಿಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ