ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ಮಸೀದಿಯಲ್ಲಿ ಪ್ರಾರ್ಥನೆಗೆ ಜನ ತುಂಬಿ ಹೆಚ್ಚುವರಿ ಕೆಲವರು ರಸ್ತೆಯಲ್ಲಿ ನಮಾಝ್ ನಿರ್ವಹಿಸಿದ ಕಾರಣಕ್ಕೆ ಪೊಲೀಸರು ಸುಮೋಟೋ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ನಮಾಝ್ ನಿರ್ವಹಣೆಯನ್ನು ವಿಡಿಯೋ ಚಿತ್ರೀಕರಿಸಿ ಉದ್ವಿಗ್ನ ಸೃಷ್ಟಿಸಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ಮತ್ತು ಇತರ ಧರ್ಮೀಯರ ರಸ್ತೆಯಲ್ಲಿನ ಪ್ರಾರ್ಥನೆಯ ವಿರುದ್ಧವೂ ಪೊಲೀಸರು ಇನ್ನು ಮುಂದೆ ಸ್ವಯಂ ಪ್ರಕರಣ ದಾಖಲಿಸಲಿ ಎಂದು ಕೆ.ಅಶ್ರಫ್ ಪ್ರತಿಕ್ರಿಯಿಸಿದ್ದಾರೆ.
ಆರಾಧನಾ ಕೇಂದ್ರಗಳಲ್ಲಿ ಜನ ಜಮಾವಣೆ ಅಧಿಕವಾದಾಗ ಜನರು ಸಾಂದರ್ಭಿಕವಾಗಿ ಸಾರ್ವಜನಿಕ ಸ್ಥಳವನ್ನು ಅವಲಂಬಿಸುವುದು ವಾಡಿಕೆ. ಅದು ಉದ್ದೇಶ ಪೂರಕ ವಾಗಿರುವುದಿಲ್ಲ. ಆದರೆ ಈ ಘಟನೆಯನ್ನು ಚಿತ್ರೀಕರಿಸಿ ವೈಭವೀಕರಿಸುವ ಮನಸ್ಥಿತಿ ಸರಿಯಲ್ಲ. ಇತ್ತೀಚೆಗೆ ರೈಲ್ವೆ ನಿಲ್ದಾಣದಲ್ಲಿ ಸಂಪೂರ್ಣ ಪ್ಲಾಟ್ ಫಾರಂ ಅನ್ನು ಉಪಯೋಗಿಸಿ ಮಂತ್ರ ವಾಚನ ಪಠಿಸಿ ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಆಚರಣೆ ಗೈಯುವಾಗ ಪೊಲೀಸರು ಎಲ್ಲಿದ್ದರು ಎಂದು ಉತ್ತರಿಸಬೇಕಿದೆ.
ಸ್ವಯಂ ಪ್ರೇರಿತ ಪ್ರಕರಣ ಒಂದೇ ಧರ್ಮದ ಅನುಯಾಯಿಗಳಿಗೆ ಅನ್ವಯ ವಾಗುವುದಿಲ್ಲ. ಸರ್ವರಿಗೂ ಅನ್ವಯವಾಗಲಿ. ಕೇವಲ ಐದು ನಿಮಿಷದ ನಮಾಝ್ ಪ್ರಾರ್ಥನೆ ರಸ್ತೆಯಲ್ಲಿ ತೊಂದರೆ ಆಗುವುದಾದಾರೆ, ದಿನಗಟ್ಟಲೆ ರಸ್ತೆಗಳನ್ನು ತಡೆ ನಿರ್ಮಿಸಿ ಜರುಗುವ ಧಾರ್ಮಿಕ ಆಚರಣೆಗಳು ಏನನ್ನು ಸೂಚಿಸುತ್ತದೆ ಎಂದು ಪೊಲೀಸರು ಸಾರ್ವಜನಿಕರಿಗೆ ಉತ್ತರಿಸಬೇಕಿದೆ. ಪೊಲೀಸರು ಪಕ್ಷಪಾತಿಯ ಧೋರಣೆ ಅನುಸರಿಸಿದರೆ ಹೋರಾಟ ಮುಂದುವರಿಯಲಿದೆ ಎಂದು ಕೆ.ಅಶ್ರಫ್( ಮಾಜಿ ಮೇಯರ್) ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ