ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ಮಸೀದಿಯಲ್ಲಿ ಪ್ರಾರ್ಥನೆಗೆ ಜನ ತುಂಬಿ ಹೆಚ್ಚುವರಿ ಕೆಲವರು ರಸ್ತೆಯಲ್ಲಿ ನಮಾಝ್ ನಿರ್ವಹಿಸಿದ ಕಾರಣಕ್ಕೆ ಪೊಲೀಸರು ಸುಮೋಟೋ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ನಮಾಝ್ ನಿರ್ವಹಣೆಯನ್ನು ವಿಡಿಯೋ ಚಿತ್ರೀಕರಿಸಿ ಉದ್ವಿಗ್ನ ಸೃಷ್ಟಿಸಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ಮತ್ತು ಇತರ ಧರ್ಮೀಯರ ರಸ್ತೆಯಲ್ಲಿನ ಪ್ರಾರ್ಥನೆಯ ವಿರುದ್ಧವೂ ಪೊಲೀಸರು ಇನ್ನು ಮುಂದೆ ಸ್ವಯಂ ಪ್ರಕರಣ ದಾಖಲಿಸಲಿ ಎಂದು ಕೆ.ಅಶ್ರಫ್ ಪ್ರತಿಕ್ರಿಯಿಸಿದ್ದಾರೆ.
ಆರಾಧನಾ ಕೇಂದ್ರಗಳಲ್ಲಿ ಜನ ಜಮಾವಣೆ ಅಧಿಕವಾದಾಗ ಜನರು ಸಾಂದರ್ಭಿಕವಾಗಿ ಸಾರ್ವಜನಿಕ ಸ್ಥಳವನ್ನು ಅವಲಂಬಿಸುವುದು ವಾಡಿಕೆ. ಅದು ಉದ್ದೇಶ ಪೂರಕ ವಾಗಿರುವುದಿಲ್ಲ. ಆದರೆ ಈ ಘಟನೆಯನ್ನು ಚಿತ್ರೀಕರಿಸಿ ವೈಭವೀಕರಿಸುವ ಮನಸ್ಥಿತಿ ಸರಿಯಲ್ಲ. ಇತ್ತೀಚೆಗೆ ರೈಲ್ವೆ ನಿಲ್ದಾಣದಲ್ಲಿ ಸಂಪೂರ್ಣ ಪ್ಲಾಟ್ ಫಾರಂ ಅನ್ನು ಉಪಯೋಗಿಸಿ ಮಂತ್ರ ವಾಚನ ಪಠಿಸಿ ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಆಚರಣೆ ಗೈಯುವಾಗ ಪೊಲೀಸರು ಎಲ್ಲಿದ್ದರು ಎಂದು ಉತ್ತರಿಸಬೇಕಿದೆ.
ಸ್ವಯಂ ಪ್ರೇರಿತ ಪ್ರಕರಣ ಒಂದೇ ಧರ್ಮದ ಅನುಯಾಯಿಗಳಿಗೆ ಅನ್ವಯ ವಾಗುವುದಿಲ್ಲ. ಸರ್ವರಿಗೂ ಅನ್ವಯವಾಗಲಿ. ಕೇವಲ ಐದು ನಿಮಿಷದ ನಮಾಝ್ ಪ್ರಾರ್ಥನೆ ರಸ್ತೆಯಲ್ಲಿ ತೊಂದರೆ ಆಗುವುದಾದಾರೆ, ದಿನಗಟ್ಟಲೆ ರಸ್ತೆಗಳನ್ನು ತಡೆ ನಿರ್ಮಿಸಿ ಜರುಗುವ ಧಾರ್ಮಿಕ ಆಚರಣೆಗಳು ಏನನ್ನು ಸೂಚಿಸುತ್ತದೆ ಎಂದು ಪೊಲೀಸರು ಸಾರ್ವಜನಿಕರಿಗೆ ಉತ್ತರಿಸಬೇಕಿದೆ. ಪೊಲೀಸರು ಪಕ್ಷಪಾತಿಯ ಧೋರಣೆ ಅನುಸರಿಸಿದರೆ ಹೋರಾಟ ಮುಂದುವರಿಯಲಿದೆ ಎಂದು ಕೆ.ಅಶ್ರಫ್( ಮಾಜಿ ಮೇಯರ್) ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?