ಮಂಗಳೂರು: ಮಸೀದಿಯ ಮುಂಬಾಗದಲ್ಲಿ ನಮಾಜು ನಿರ್ವಹಿಸಿದವರ ವಿರುದ್ಧ ದಾಖಲಿಸಲಾದ ಸುಮೊಟೋ ಪ್ರಕರಣವನ್ನು ಸ್ಥಗಿತಗೊಳಿಸುವುದಾಗಿ ಪೋಲೀಸ್ ಆಯುಕ್ತರಿಂದ ಭರವಸೆ ಲಭಿಸಿದೆ.
ಇತ್ತೀಚೆಗೆ ಮಂಗಳೂರು ಕಂಕನಾಡಿ ಮಸೀದಿ ಹೊರಾಂಗಣದಲ್ಲಿ ಜುಮಾ ನಮಾಝ್ ವೇಳೆಯಲ್ಲಿ ಮಸೀದಿಯಲ್ಲಿ ಜನ ಭರ್ತಿ ಆದ ನಂತರ ಭೇಟಿ ನೀಡಿದ ಕೆಲವು ವ್ಯಕ್ತಿಗಳು ರಸ್ತೆಯ ಬದಿಯಲ್ಲಿ ನಮಾಝ್ ನಿರ್ವಹಿಸಿದ್ದು, ಅದನ್ನು ಸ್ಥಳೀಯರೊಬ್ಬರು ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿದ್ದರು.
ಈ ಬಗ್ಗೆ ಸುದ್ದಿಯಾದ ಕಾರಣದಿಂದ ಮಂಗಳೂರು ನಗರ ಪೊಲೀಸರು ನಮಾಝ್ ನಿರ್ವಹಿಸಿದ ವ್ಯಕ್ತಿಗಳ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿದ್ದು, ಪೊಲೀಸರ ಈ ನಡೆಗೆ ಮುಸ್ಲಿಮ್ ಸಮುದಾಯದ ಕಡೆಯಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದ ಹಿನ್ನಲೆಯಲ್ಲಿ ಇಂದು ಮುಸ್ಲಿಮ್ ಮುಂದಾಳುಗಳು ನಿಯೋಗವೊಂದು ಪೋಲೀಸು ಆಯುಕ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ.
ಪೋಲೀಸು ಆಯುಕ್ತರು ಸದರಿ ಪ್ರಕರಣದಲ್ಲಿ ತನಿಖೆ ಸ್ಥಗಿತ ಗೊಳಿಸಿ ಪ್ರಕರಣ ಮುಕ್ತಾಯ ಗೊಳಿಸಿದುವುದಾಗಿ ಭರವಸೆ ನೀಡಿದ್ದಾಗಿ ನಿಯೋಗ ವ್ಯಕ್ತಪಡಿಸಿದೆ.
ನಿಯೋಗದಲ್ಲಿ ಕೊಡಿಚಲ್ ಇಬ್ರಾಹಿಮ್, ಕನಚೂರು ಮೋನು ಹಾಜಿ, ಕೆ.ಅಶ್ರಫ್ ಮಾಜಿ ಮೇಯರ್, ಎಂ.ಎಸ್. ಮೊಹಮ್ಮದ್, ಶಾಹುಲ್ ಹಮೀದ್, ಅಬ್ದುಲ್ ಲತೀಫ್, ಸಂಶುದ್ದೀನ್, ಅಬ್ದುಲ್ ರೌಫ್, ಸಿರಾಜ್ ಬಜ್ಪೆ, ನಿಸಾರ್ ಬಜ್ಪೆ, ವಹಾಬ್ ಕುದ್ರೋಳಿ, ಮೊಹಮ್ಮದ್ ಬಪ್ಪಳಿಕೆ, ರಫೀಕ್ ಕಣ್ಣೂರು, ಕಣ್ಣೂರು ಸಲೀಮ್ ಮತ್ತಿತರರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?