ಮಂಗಳೂರು: ಕೇರಳದಲ್ಲಿ ದುಲ್ ಹಜ್ ತಿಂಗಳ ಚಾಂದ್ ದರ್ಶನವಾದ ಹಿನ್ನೆಲೆಯಲ್ಲಿ ನಾಳೆ (ಜೂನ್ 8) ದುಲ್ ಹಜ್ಜ್ ಮೊದಲನೇ ದಿನವಾಗಿರಲಿದೆ ಹಾಗೂ ಜೂನ್ 17 ರಂದು (ದುಲ್ ಹಜ್ 10) ಈದುಲ್ ಅದ್ಹಾ ಆಚರಿಸಲಾಗುವುದು ಎಂದು ಖಾಝಿಗಳು ಘೋಷಣೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿಗಳಾದ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಮದನಿ ಅಲ್ ಬುಖಾರಿ ಮತ್ತು ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಹಾಗೂ ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಮಾಣಿ ಉಸ್ತಾದ್ ಘೋಷಿಸಿದ್ದಾರೆ.
ಇಸ್ಲಾಮಿಕ್ ಕ್ಯಾಲೆಂಡರ್ ನ ಕೊನೆಯ ತಿಂಗಳಾದ ದುಲ್ ಹಜ್ ಶನಿವಾರದಿಂದ ಆರಂಭಗೊಳ್ಳಲಿದೆ. ಇಸ್ಲಾಮಿಕ್ ಧಾರ್ಮಿಕ ಆಚರಣೆಗಳಲ್ಲಿ ಒಂದಾದ ಪವಿತ್ರ ಹಜ್ ಕರ್ಮದ ಪ್ರಮುಖ ಭಾಗವಾಗಿರುವ ಅರಫಾ ದಿನವನ್ನು ದುಲ್ ಹಜ್ 9 (ಜೂನ್ 16) ರಂದು ಆಚರಿಸಲಾಗುತ್ತಿದೆ, ಅಂದು ಉಪವಾಸ ಸುನ್ನತ್ತಾಗಿದೆ.
ಅದೇ ರೀತಿ, ದುಲ್ ಹಜ್ ತಿಂಗಳ ಆರಂಭದಿಂದ 13 ರ ರಾತ್ರಿ ವರೆಗೆ ಬಲಿ ನೀಡಲ್ಪಡುವ ಜಾನುವಾರುಗಳನ್ನು ಕಂಡಲ್ಲಿ ಮತ್ತು ಎಲ್ಲಾ ಫರ್ಳ್ ನಮಾಜ್ ಗಳ ಬಳಿಕ ತಕ್ಬೀರ್ ಹೇಳುವುದು ಕೂಡ ಸುನ್ನತ್ ಅಥವಾ ಶ್ರೇಷ್ಠ ಕರ್ಮವಾಗಿದೆ. ಬಕ್ರೀದ್ ನಮಾಜ್ ಬಳಿಕ ಉಳ್ ಹಿಯತ್ ನೀಡುವ ಸಮಯ ಪ್ರಾರಂಭವಾಗಲಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ