ಮಂಗಳೂರು: ಕೇರಳದಲ್ಲಿ ದುಲ್ ಹಜ್ ತಿಂಗಳ ಚಾಂದ್ ದರ್ಶನವಾದ ಹಿನ್ನೆಲೆಯಲ್ಲಿ ನಾಳೆ (ಜೂನ್ 8) ದುಲ್ ಹಜ್ಜ್ ಮೊದಲನೇ ದಿನವಾಗಿರಲಿದೆ ಹಾಗೂ ಜೂನ್ 17 ರಂದು (ದುಲ್ ಹಜ್ 10) ಈದುಲ್ ಅದ್ಹಾ ಆಚರಿಸಲಾಗುವುದು ಎಂದು ಖಾಝಿಗಳು ಘೋಷಣೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿಗಳಾದ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಮದನಿ ಅಲ್ ಬುಖಾರಿ ಮತ್ತು ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಹಾಗೂ ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಮಾಣಿ ಉಸ್ತಾದ್ ಘೋಷಿಸಿದ್ದಾರೆ.
ಇಸ್ಲಾಮಿಕ್ ಕ್ಯಾಲೆಂಡರ್ ನ ಕೊನೆಯ ತಿಂಗಳಾದ ದುಲ್ ಹಜ್ ಶನಿವಾರದಿಂದ ಆರಂಭಗೊಳ್ಳಲಿದೆ. ಇಸ್ಲಾಮಿಕ್ ಧಾರ್ಮಿಕ ಆಚರಣೆಗಳಲ್ಲಿ ಒಂದಾದ ಪವಿತ್ರ ಹಜ್ ಕರ್ಮದ ಪ್ರಮುಖ ಭಾಗವಾಗಿರುವ ಅರಫಾ ದಿನವನ್ನು ದುಲ್ ಹಜ್ 9 (ಜೂನ್ 16) ರಂದು ಆಚರಿಸಲಾಗುತ್ತಿದೆ, ಅಂದು ಉಪವಾಸ ಸುನ್ನತ್ತಾಗಿದೆ.
ಅದೇ ರೀತಿ, ದುಲ್ ಹಜ್ ತಿಂಗಳ ಆರಂಭದಿಂದ 13 ರ ರಾತ್ರಿ ವರೆಗೆ ಬಲಿ ನೀಡಲ್ಪಡುವ ಜಾನುವಾರುಗಳನ್ನು ಕಂಡಲ್ಲಿ ಮತ್ತು ಎಲ್ಲಾ ಫರ್ಳ್ ನಮಾಜ್ ಗಳ ಬಳಿಕ ತಕ್ಬೀರ್ ಹೇಳುವುದು ಕೂಡ ಸುನ್ನತ್ ಅಥವಾ ಶ್ರೇಷ್ಠ ಕರ್ಮವಾಗಿದೆ. ಬಕ್ರೀದ್ ನಮಾಜ್ ಬಳಿಕ ಉಳ್ ಹಿಯತ್ ನೀಡುವ ಸಮಯ ಪ್ರಾರಂಭವಾಗಲಿದೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ