ಉಳ್ಳಾಲ: ಸುನ್ನೀ ಯುವಜನ ಸಂಘ (SჄS) ಕಿನ್ಯ ಸರ್ಕಲ್ ವಾರ್ಷಿಕ ಕೌನ್ಸಿಲ್ ಸಭೆಯು ಕಿನ್ಯ ಬೆಳರಿಂಗೆ ಸುನ್ನೀ ಸೆಂಟರ್ ನಲ್ಲಿ ಸರ್ಕಲ್ ಅಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯ ರವರ ಅಧ್ಯಕ್ಷತೆಯಲ್ಲಿ ಸಯ್ಯಿದ್ ಅಲವಿ ತಂಙಳ್ ಮೀಂಪ್ರಿ ರವರ ದುಆ ದೊಂದಿಗೆ ಪ್ರಾರಂಭಗೊಂಡ ಸಭೆಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಕಿನ್ಯ ಸರ್ಕಲ್ ಸಮಿತಿ ಅಧ್ಯಕ್ಷ ಪರಮಾಂಡ ಬಿ.ಎಂ ಇಸ್ಮಾಈಲ್ ಹಾಜಿ ಉದ್ಘಾಟಿಸಿದರು.
ಸಾಂತ್ವನ ಕಾರ್ಯದರ್ಶಿ ಅಯ್ಯೂಬ್ ಖುತುಬಿನಗರ ವಾರ್ಷಿಕ ವರದಿಯನ್ನು ಹಾಗೂ ಸರ್ಕಲ್ ಕೋಶಾಧಿಕಾರಿ ಅಬ್ದುಲ್ ಹಮೀದ್ ಮೀಂಪ್ರಿ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು.
ದೇರಳಕಟ್ಟೆ ಝೋನ್ ನಿಂದ ವೀಕ್ಷಕರಾಗಿ ಆಗಮಿಸಿದ ದಅವಾ ಕಾರ್ಯದರ್ಶಿ ಹೈದರ್ ಹಿಮಮಿ ಮಲಾರ್ ಕೌನ್ಸಿಲ್ ಪ್ರಕ್ರಿಯೆ ಯನ್ನು ಉತ್ತಮವಾಗಿ ನಡೆಸಿ ಕೊಟ್ಟರು,ಕಿನ್ಯ ಸರ್ಕಲ್ ನಾಯಕ ಹನೀಫ್ ಸಖಾಫಿ ಖುತುಬಿನಗರ ಮುನ್ನುಡಿ ಭಾಷಣ ನಡೆಸಿದರು.
ಮುಸ್ಲಿಂ ಜಮಾಅತ್ ಕಿನ್ಯ ಸರ್ಕಲ್ ಸಮಿತಿ ಕೋಶಾಧಿಕಾರಿ ಎಂಕೆಎಂ ಇಸ್ಮಾಈಲ್ ಮೀಂಪ್ರಿ, ದೇರಳಕಟ್ಟೆ ಝೋನ್ ಸಮಿತಿ ಪ್ರಧಾನ ಕಾರ್ಯದರ್ಶಿ ಸ್ವಾಲಿಹ್ ಬೆಳ್ಮ,ಸೋಶಿಯಲ್ ಕಾರ್ಯದರ್ಶಿ ಉಸ್ಮಾನ್ ಪಜೀರ್,ಎಸ್ಸೆಸ್ಸೆಫ್ ಕಿನ್ಯ ಸೆಕ್ಟರ್ ಸಮಿತಿ ಅಧ್ಯಕ್ಷ ಇರ್ಫಾನ್ ಸಖಾಫಿ ಖುತುಬಿನಗರ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು.
KCF ನಾಯಕ ರಿಯಾಝ್ ಕುರಿಯ,SჄS ಕಿನ್ಯ ಸರ್ಕಲ್ ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಲಾಂ ಬಾಕಿಮಾರ್,ಇಸಾಬ ಕಾರ್ಯದರ್ಶಿ ಬಷೀರ್ ಲತೀಫಿ ಕುರಿಯ ಹಾಗೂ ಸರ್ಕಲ್ ವ್ಯಾಪ್ತಿಯ ಏಳು ಯುನಿಟ್ ಗಳ ಕೌನ್ಸಿಲರ್ ಗಳು ಭಾಗವಹಿಸಿದ್ದರು,ಸರ್ಕಲ್ ಸಮಿತಿ ಉಪಾಧ್ಯಕ್ಷ ಪಿ.ಎಂ ಉಸ್ಮಾನ್ ಝುಹ್ರಿ ಕುರಿಯ ಸ್ವಾಗತಿಸಿ ದಅವಾ ಕಾರ್ಯದರ್ಶಿ ಉಮರುಲ್ ಫಾರೂಖ್ ಸಖಾಫಿ ಮೀಂಪ್ರಿ ಧನ್ಯವಾದ ಸಲ್ಲಿಸಿದರು.



















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ