ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಈದ್ ಸಂಭ್ರಮ
ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಅಲ್ಹಾ (ಬಕ್ರೀದ್) ಹಬ್ಬವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.
ಹಬ್ಬದ ಪ್ರಯುಕ್ತ ಹೊಸ ವಸ್ರ್ತಗಳನ್ನು ಧರಿಸಿದ ಪುರುಷರು ಮತ್ತು ಮಕ್ಕಳು ಬೆಳಗ್ಗೆಯೇ ಮಸ್ಜಿದ್ ಗಳಿಗೆ ತೆರಳಿ ಬಕ್ರೀದ್ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು. ಬಲಿ ಪೆರುನಾಳ್ ಪ್ರಾರ್ಥನೆಯ ಬಳಿಕ ಪರಸ್ಪರ ಸ್ನೇಹದ ಸಂಕೇತವಾಗಿ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಮಹಿಳೆಯರೂ ಕೂಡ ಹೊಸ ವಸ್ತ್ರ ಗಳನ್ನು ಧರಿಸಿ ವಿಶೇಷ ತಿಂಡಿ ತಿನಿಸು, ಖಾದ್ಯಗಳನ್ನು ತಯಾರಿಸಿ ಕುಟುಂಬ ಸದಸ್ಯರ ಜೊತೆ ಸಹಭೋಜನ ಮಾಡುವ ಮೂಲಕ ಮನೆಯಲ್ಲೇ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು.
ಕಾಜೂರಿನಲ್ಲಿ ವಿಶೇಷ ಪ್ರಾರ್ಥನೆ;
ನಾಡಿನ ಸರ್ವಧರ್ಮೀಯರ ಸೌಹಾರ್ದ ಕೇಂದ್ರವಾದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ಕಾಜೂರು ಮಸ್ಜಿದ್ ನಲ್ಲಿ ಈದುಲ್ ಅಲ್ಹಾ (ಬಕ್ರೀದ್) ಹಬ್ಬದ ಪ್ರಾರ್ಥನೆಗೆ ಕಾಜೂರು ತಂಙಳ್ ನೇತೃತ್ವ ನೀಡಿದರು. ಹಬ್ಬದ ಪ್ರಾರ್ಥನೆ ಬಳಿಕ ಇಲ್ಲಿ ಅಂತ್ಯವಿಶ್ರಾಂತಿ ಹೊಂದುತ್ತಿರುವ ಔಲಿಯಾಗಳ ಸನ್ನಿದಾನದಲ್ಲಿ ವಿಶ್ವ ಶಾಂತಿಗಾಗಿ ದುಆ ನೆರವೇರಿಸಲಾಯಿತು.
ಈದ್ ಸಂಭ್ರಮದಲ್ಲಿ ಬೆಳ್ತಂಗಡಿ ತಾಲೂಕು inspecer ಸುಬ್ಬಾಪೂರ್ ಮಠ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ