ದೋಹಾ: ಭಟ್ಕಳ ನಿವಾಸಿಯಾಗಿರುವ ರಶೀದ್ ಖಾನ್ ಪಠಾಣ್ (36) ಎಂಬವರು ಕತ್ತರ್ ನ ಅಲ್-ಖೋರ್ ಎಂಬಲ್ಲಿ ಹೃದಯಾಘಾತದಿಂದ ನಿಧನರಾಗಿರುತ್ತಾರೆ. ಭಟ್ಕಳ ಬಂಗಾರಮಕ್ಕಿ ಇಸುಬ್ ಎಂಬವರ ಪುತ್ರರಾಗಿರುವ ಇವರು ಕಳೆದ ಹಲವಾರು ವರ್ಷಗಳಿಂದ ಕತ್ತರ್ ನಲ್ಲಿ ಡ್ರೈವರ್ ಆಗಿ ಕೆಲಸದಲ್ಲಿದ್ದು, ದಿನಾಂಕ 07-08-2024 ಬುಧವಾರದಂದು ಹೃದಯಾಘಾತದಿಂದ ನಿಧನರಾಗಿರುತ್ತಾರೆ.
ಮರಣದ ವಿಷಯ ತಿಳಿದು ತಕ್ಷಣವೇ ಕಾರ್ಯಪ್ರವೃತರಾದ ಕತ್ತರ್ ಕೆಸಿಎಫ್ ಸಂಘಟನೆಯ ಪದಾಧಿಕಾರಿಗಳು ಸ್ಥಳಕ್ಕೆ ತೆರಳಿ, ಕತ್ತರ್ ನಲ್ಲಿರುವ ಮೃತರ ಕುಟುಂಬಸ್ಥರನ್ನು ಸಂಪರ್ಕಿಸಿ, ಮೃತದೇಹವನ್ನು ಊರಿಗೆ ತಲುಪಿಸಲು ಅಗತ್ಯವಿರುವ ದಾಖಲೆಗಳ ನಿರ್ವಹಣೆಯ ಕಾರ್ಯ ನಿರ್ವಹಿಸಿದರು.
ಮೃತಹೊಂದಿದ ರಶೀದ್ ಖಾನ್ ರವರು ಇತ್ತೀಚೆಗಷ್ಟೆ ಮದುವೆಯಾಗಿದ್ದು, ತನ್ನ ಪತ್ನಿ, ತಂದೆ, ತಾಯಿ ಮತ್ತು ಬಂಧುವರ್ಗದವರನ್ನು ಅಗಲಿದ್ದಾರೆ. ಮರಣ ಸುದ್ದಿ ಕೇಳಿ ತುರ್ತಾಗಿ ಕಾರ್ಯಾಚರಣೆಗಿಳಿದ ಕೆಸಿಎಫ್, ತನ್ನ ಸಾಂತ್ವನ ವಿಭಾಗದ ಮೂಲಕ ಅಗತ್ಯ ದಾಖಲೆಗಳನ್ನು ಏರ್ಪಾಡುಗೊಳಿಸಿ, ಕೊನೆಯಲ್ಲಿ ಧಾರ್ಮಿಕ ಸಂಪ್ರದಾಯದಂತೆ ಮಯ್ಯಿತ್ ನಮಾಜ್ ಮತ್ತು ಪ್ರಾರ್ಥನೆ ನಿರ್ವಹಿಸಿ ಮೃತದೇಹವನ್ನು ಊರಿಗೆ ಕಳುಹಿಸಿಕೊಡಲಾಯ್ತು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ