ದಕ್ಷಿಣ ಭಾರತದ ಪ್ರಮುಖ ಝಿಯಾರತ್ ಕೇಂದ್ರ ವಾದ ಮಡವೂರ್ ಮಖಾಮ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಶೈಖುನಾ ಸಿಎಂ ವಲಿಯುಲ್ಲಾಹಿ ಅವರ ಜೀವಿತ ಕಾಲದಲ್ಲಿ ಅವರ ನಿರ್ದೇಶನ ಪ್ರಕಾರ ಪ್ರಾರಂಭಿಸಿದ ಸಿಎಂ ಸೆಂಟರ್ ಶಿಕ್ಷಣ ಸಂಸ್ಥೆಗಳ ಮೂವತ್ತ ಐದನೇ ವಾರ್ಷಿಕ ಮಹಾ ಸಮ್ಮೇಳನ ಶೀಘ್ರದಲ್ಲೇ ನಡೆಯುವ ಹಿನ್ನೆಲೆಯಲ್ಲಿ ಅದರ ಪ್ರಚಾರಾರ್ಥ ಕರ್ನಾಟಕ ರಾಜ್ಯ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು
ಅಧ್ಯಕ್ಷರಾಗಿ ಮುಹಮ್ಮದ್ ಅಲಿ ಸಖಾಫಿ ಅಶ್ಅರಿಯಾ, ಪ್ರಧಾನ ಸಂಚಾಲಕರಾಗಿ ಸಲೀಂ ಕನ್ಯಾಡಿ ಹಾಗೂ ಪ್ರಧಾನ ಸಲಹೆ ಗಾರರಾಗಿ ಡಾ ಅಬ್ದುಲ್ ರಶೀದ್ ಝೖನೀ ಅವರನ್ನು ಆರಿಸಲಾಯಿತು.
ಸಲಹೆಗರಾರಾಗಿ ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಮದನಿ ಜೆಪ್ಪು, ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಕೆ ಎಂ ಕಾಮಿಲ್ ಸಖಾಫಿ, ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾದಿಖ್ ಮಾಸ್ಟರ್ ಬೆಳ್ತಂಗಡಿ, ಎಸ್ ಎಸ್ ಎಫ್ ರಾಜ್ಯ ಕೋಶಾಧಿಕಾರಿ ಮುಸ್ತಫಾ ನಈಮಿ ಹಾವೇರಿ ಅವರನ್ನು ನೇಮಕ ಮಾಡಲಾಯಿತು.
ಸದಸ್ಯರಾಗಿ ಖಲೀಲ್ ಮಾಲಿಕಿ ಬೋಳಂತೂರ್, ಅಬ್ದುಲ್ ಅಝೀಝ್ ಮಿಸ್ಬಾಹಿ ಪುತ್ತೂರು,
ಅಬ್ದುಲ್ ರಹ್ಮಾನ್ ರಝ್ವೀ ಉಡುಪಿ, ಅಹ್ಮದ್ ಮದನಿ ಕೊಡಗು, ಇಸ್ಮಾಯಿಲ್ ಸಅದಿ ಊರುಮನೆ,ಮನ್ಸೂರ್ ಕೋಟಗದ್ದೆ, ಉಮರ್ ಮಾಸ್ಟರ್ ಎನ್ ಎಸ್, ಇಕ್ಬಾಲ್ ಬಪ್ಪಳಿಗೆ, ಸ್ವಾಲಿಹ್ ಮುರ ಇವರನ್ನು ಆರಿಸಲಾಯಿತು.
ಶೀಘ್ರದಲ್ಲೇ ವಿಶಾಲವಾದ ಜಿಲ್ಲಾ ಮಟ್ಟದ ಸಮಾವೇಶ ನಡೆಸಿ ವಿವಿಧ ಯೋಜನೆಗಳನ್ನು ಹಮ್ಮಿ ಕೊಳ್ಳಲು ನಿರ್ಧಾರಿಸಲಾಯಿತು.
ಈ ಕುರಿತು ಮಂಗಳೂರು ಪಂಪ್ವೆಲ್ ಹಿರಾ ಸಭಾಂಗಣದಲ್ಲಿ ಸೇರಿದ ಸಭೆಯಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಅಮೀನು ಶರೀಅ ಸಯ್ಯಿದ್ ಅಲಿ ಬಾಫಖಿ ತಂಙಳ್ ಅಧ್ಯಕ್ಷ ತೆ ವಹಿಸಿದರು, ಕರ್ನಾಟಕ ಜಂ ಇಯ್ಯತುಲ್ ಉಲಮಾ ಅಧ್ಯಕ್ಷ ಝೖನುಲ್ ಉಲಮಾ ಖಾಝಿ ಮಾಣಿ ಉಸ್ತಾದ್ ಉದ್ಘಾಟನೆ ಮಾಡಿದರು,
ಸಯ್ಯಿದ್ ಅಬ್ದುಲ್ ಸಬೂರ್ ಬಾಹಸನ್ ಅವೇಲಂ,ಸಯ್ಯಿದ್ ಖಲೀಲ್ ಬಾಅಲವಿ ತಂಙಳ್ ಮಡವೂರ್, ಹೈದರ್ ಮದನಿ ಕರಾಯ, ಜೆಪ್ಪು ಮದನಿ, ಅಶ್ಅರಿಯಾ ಸಖಾಫಿ, ಮುಸ್ತಫಾ ನಈಮಿ, ಸಾದಿಖ್ ಮಾಸ್ಟರ್ ಮುಂತಾದವರು ಶುಭ ಹಾರೈಸಿದರು.
ಡಾ ಎಮ್ಮೆಸ್ಸೆಂ. ಝೖನೀ ಕಾಮಿಲ್ ಸ್ವಾಗತಿಸಿ ಸಿ ಎಂ ಸೆಂಟರ್ ಮೆನೇಜರ್ ಮುಸ್ತಫಾ ಸಖಾಫಿ ಮರಂಜಾಟ್ಟಿ ಧನ್ಯವಾದಗಳು ಹೇಳಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ