ಅಬುಧಾಬಿ:ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆ ಸಿ ಎಫ್ ಅಬುಧಾಬಿ ಪ್ರತಿ ವರ್ಷ ಹಮ್ಮಿಕೊಂಡು ಬರುವ ಬೃಹತ್ ಮೀಲಾದ್ ಸಮಾವೇಶವು ದಿನಾಂಕ ಸೆಪ್ಟೆಂಬರ್ 8 ಆದಿತ್ಯವಾರದಂದು ಇಂಡಿಯನ್ ಇಸ್ಲಾಮಿಕ್ ಸೆಂಟರ್ ಅಬೂಧಾಬಿಯಲ್ಲಿ ಮಗ್ರಿಬ್ ನಮಾಜಿನ ಬಳಿಕ, ಮೌಲಿದ್ ಹಾಗೂ ಬುರ್ದಾ ಮಜ್ಲಿಸಿನೊಂದಿಗೆ ಪ್ರಾರಂಭಗೊಂಡಿತು.
ಕೆ ಸಿ ಎಫ್ ತೈಬಾ ಮದರಸ ವಿದ್ಯಾರ್ಥಿ ಮುಹಮ್ಮದ್ ಅರ್ಶ್ ಕಿರಾಅತ್ ಪಠಿಸಿದರು.ಯುಎಇ ರಾಷ್ಟ್ರೀಯ ಅಧ್ಯಕ್ಷರಾದ ಕೆದುಂಬಾಡಿ ಇಬ್ರಾಹಿಂ ಸಖಾಫಿ ವೇದಿಕೆಯನ್ನು ಅಧಿಕೃತವಾಗಿ ಉದ್ಘಾಟಿಸಿದರು.ಬಳಿಕ ತ್ವೈಬಾ ಮದರಸ ವಿದ್ಯಾರ್ಥಿಗಳಿಂದ ನ್ಯಾಷನಲ್ ಆಂತಂ ಆಲಾಪನೆಯು ಕಾರ್ಯಕ್ರಮಕ್ಕೆ ರಂಗು ನೀಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದವರಿಗೆ ಕೆಸಿಎಫ್ ಅಬುಧಾಬಿ ಮೀಲಾದ್ ಸಮಿತಿ ವತಿಯಿಂದ ಗೌರವ ಸ್ಮರಣಿಕೆಗಳನ್ನು ನೀಡಲಾಯಿತು.
ತದನಂತರ ಇಸ್ಲಾಮಿನ ಗತಕಾಲದ ಚರಿತ್ರೆಗಳ ನೆನಪಿಸಿ ಸಯ್ಯಿದ್ ಅಬ್ದುಲ್ ರಹ್ಮಾನ್ ಆಟ್ಟೀರಿ ತಂಙಳ್ ಮುಖ್ಯ ಪ್ರಭಾಷಣ ನಡೆಸಿದರು.ಈ ವೇಳೆ ವೇದಿಕೆಯಲ್ಲಿ ,ಕೂಟ್ಟಂಬಾರ ಅಬ್ದುಲ್ ರಹ್ಮಾನ್ ದಾರಿಮಿ , ಕೆಸಿಎಫ್ ಐಸಿ ನಾಳೆಡ್ಜ್ ಸೆಕ್ರೆಟರಿ ಹಮೀದ್ ಸಅದಿ , ಕೆಸಿಎಫ್ ಯುಎಇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೂಸ ಹಾಜಿ ಬಸರ, ಕೆಸಿಎಫ್ ಯುಎಇ ರಾಷ್ಟ್ರೀಯ ಟ್ರಷರರ್ ಇಬ್ರಾಹಿಂ ಹಾಜಿ ಬ್ರೈಟ್ , ಮೀಲಾದ್ ಸಮಿತಿ ಚಯರ್ಮಾನ್ ರಝಾಕ್ ಹಾಜಿ ಜಲ್ಲಿ , ರಾಶಿದ್ ಬನಿಯಾಸ್ ಸ್ಪೈಕ್ ,ಇಂಡಿಯನ್ ಇಸ್ಲಾಮಿಕ್ ಸೆಂಟರ್ ಅಧ್ಯಕ್ಷರು ಬಾವ ಹಾಜಿ ಹಾಗೂ ಇನ್ನಿತರ ಹಲವಾರು ಉಲಮಾ ಉಮರಾ ನಾಯಕರು ಉಪಸ್ಥಿತರಿದ್ದರು.ನಂತರ ಕೆಸಿಎಫ್ ಅಬುಧಾಬಿ ಅಧ್ಯಕ್ಷರಾದ ಹಸೈನಾರ್ ಅಮಾನಿ ಸ್ವಾಗತಿಸಿದ ಕಾರ್ಯಕ್ರಮವನ್ನು ಸ್ವಾಗತ ಸಮಿತಿ ಜನರಲ್ ಕನ್ವೀನರ್ ಉಮರ್ ಈಶ್ವರಮಂಗಲ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು