ಶ್ರೀ ಪಿ.ಬಿ ಡೆ’ಸ್ಸಾ ಅವರು ಇಂದು ನಿಧನರಾಗಿದ್ದು ಪಿಯುಸಿಎಲ್ ಕರ್ನಾಟಕ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನಮ್ಮ ಹೃದಯ ಸ್ಪರ್ಶಿ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇವೆ. ಡೆ’ಸ್ಸಾ ಅವರ ನಿಧನ ತೀವ್ರ ದುಃಖ ತಂದಿದ್ದು (20 ಮೇ 1941-24 ಸೆಪ್ಟೆಂಬರ್ 2024)ಅವರ ಜೀವಿತ ಕಾಲವಧಿ ಆಗಿದೆ. ಶ್ರೀ ಡಿ’ಸಾ ಅವರು ಪಿಯುಸಿಎಲ್- ಕರ್ನಾಟಕದ ಅಧ್ಯಕ್ಷರಾಗಿದ್ದರು, ರಾಷ್ಟ್ರೀಯ ಪರಿಷತ್ತಿನ ಸದಸ್ಯರಾಗಿದ್ದರು ಮತ್ತು ಉಪಾಧ್ಯಕ್ಷರಾಗಿದ್ದರು.
ಶ್ರೀ ಡೆ’ಸ್ಸಾ ಅವರು ಮಾನವ ಹಕ್ಕುಗಳ ಅಪ್ರತಿಮ ಚಾಂಪಿಯನ್ ಆಗಿದ್ದರು ಮತ್ತು ಅವರು ನಿಖರ ಮತ್ತು ನಿರ್ದಿಷ್ಟವಾಗಿ ಮಾನವ ಹಕ್ಕು ಉಲ್ಲಂಘನೆ ವಿರುದ್ಧ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಪ್ರಮುಖವಾಗಿ ಅವರದೇ ಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾನವ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕೂಡಾ ಕಷ್ಟಸಾಧ್ಯ ಎಂಬ ಸಂಧರ್ಬದಲ್ಲಿ ಅವರು ಈ ಕಾರ್ಯವನ್ನು ಕೈಗೆತ್ತಿಕೊಂಡು ಕಾರ್ಯ ನಿರ್ವಹಿಸಿದ್ದಾರೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಸತ್ಯಶೋಧನಾ ಕಾರ್ಯಗಳನ್ನು ಪ್ರಾರಂಭಿಸುವಲ್ಲಿ ಮುಂಚೂಣಿಯಲ್ಲಿದ್ದ ಅವರು ಅನೈತಿಕ ಪೊಲೀಸ್ ಗಿರಿಯನ್ನು ಬಲವಾಗಿ ವಿರೋಧಿಸಿದ್ದಾರೆ.
ಆದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಅನೈತಿಕ ಪೋಲೀಸ್ ಗಿರಿ, ಕಸ್ಟಡಿ ಸಾವುಗಳು, ಕೋಮು ಹಿಂಸಾಚಾರ ಮತ್ತು ದ್ವೇಷದ ಭಾಷಣಗಳನ್ನು ಪ್ರಬಲವಾಗಿ ವಿರೋಧಿಸಿದ್ದು ಅದರ ತಡೆಗಾಗಿ ಕಾರ್ಯ ನಿರ್ವಹಿಸಿದ್ದಾರೆ
ಶ್ರೀ ಡೆ ‘ಸ್ಸಾ ಅವರು ‘ವೈಜ್ಞಾನಿಕ ಮನೋಭಾವ, ಮಾನವತಾವಾದ ಮತ್ತು ವಿಚಾರಣಾ ಮನೋಭಾವ’ವನ್ನು ಬೆಳೆಸುವ ಮೂಲಭೂತ ಕರ್ತವ್ಯದ ಬದ್ಧತೆಯನ್ನು ಸಾಕಾರಗೊಳಿಸಿದ್ದಾರೆ ಅವರ ನಿಧನದ ನಂತರ ಯಾವುದೇ ‘ಧಾರ್ಮಿಕ ಆಚರಣೆಗಳು, ಹೂವುಗಳು ಮತ್ತು ಹೂಗುಚ್ಛಗಳಿಲ್ಲ’ ಆದರೆ ಅವರ ಆಶಯದಲ್ಲಿ ಅವರ ಪಾರ್ಥಿವ ಶರೀರವನ್ನು ಸಾಮಾಜಿಕ ಶೈಕ್ಷಣಿಕ ಉದ್ದೇಶಕ್ಕೆ ದೇಣಿಗೆ’ ನೀಡುವುದನ್ನು ಕಾಣಬಹುದಾಗಿದೆ. ಅವರ ದೃಷ್ಟಿಕೋನದ ಭಾಗವಾಗಿದ್ದ ‘ವೈಜ್ಞಾನಿಕ ಮನೋಭಾವ’ಕ್ಕೆ ಅನುಗುಣವಾಗಿ, ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ ದಾನ ಮಾಡಬೇಕೆಂಬುದು ಅವರ ಇಚ್ಛೆಯಾಗಿತ್ತು.
ಈ ಕಷ್ಟದ ಸಮಯದಲ್ಲಿ ನಾವು ಅವರ ಕುಟುಂಬ ಮತ್ತು ಸ್ನೇಹಿತರೊಂದಿಗೆ ದುಃಖದಲ್ಲಿ ಒಂದಾಗಿ ಭಾಗಿಯಾಗಿದ್ದೇವೆ.
ಮಾನವ ಹಕ್ಕುಗಳ ಹೋರಾಟಗಾರನಾಗಿ, ಡೇ’ಸಾಅವರ ಅನುಪಸ್ಥಿತಿಯನ್ನು ಆಳವಾಗಿ ಅನುಭವಿಸಲಾಗುತ್ತದೆ. ನಾವು ಸಲ್ಲಿಸಬಹುದಾದ ಅತ್ಯುತ್ತಮ ಗೌರವವೆಂದರೆ ಮಾನವ ಹಕ್ಕುಗಳ ಉದ್ದೇಶಕ್ಕಾಗಿ ನಮ್ಮನ್ನು ಪುನರ್ ಸಮರ್ಪಿಸಿಕೊಳ್ಳುವುದು ಮತ್ತು ಮಾನವ ಹಕ್ಕುಗಳಿಗೆ ಶ್ರೀ ಡಿ’ಸಾ ಅವರ ಜೀವಮಾನದ ಬದ್ಧತೆಯನ್ನು ಅನುಕರಿಸಲು ಪ್ರಯತ್ನಿಸುವುದು ಆಗಿದೆ ಎಂದು ಕರ್ನಾಟಕ ಪಿಯುಸಿಎಲ್ ಅಧ್ಯಕ್ಷ ಅರವಿಂದ್ ನರೈನ್ ಮತ್ತು ಪ್ರಧಾನ ಕಾರ್ಯದರ್ಶಿ ಸುಜಾಯತುಲ್ಲಾ ತಮ್ಮ ಜಂಟಿ ಪ್ರಕ್ರಣೆಯಲ್ಲಿ ಹೇಳಿಕೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್