janadhvani

Kannada Online News Paper

ಕಾಟಿಪಳ್ಳದ ಮುಹಮ್ಮದ್ ಮುಸ್ತಫಾ, ರಿಯಾದಿನಲ್ಲಿ ನಿಧನ- ಅಂತ್ಯಕ್ರಿಯೆಗೆ ಕೆಸಿಎಫ್ ಸಹಕಾರ

ರಿಯಾದ್: ದಕ್ಷಿಣ ಕನ್ನಡ ಜಿಲ್ಲೆಯ ಕಾಟಿಪಳ್ಳ ಮೂಲದ ಮುಹಮ್ಮದ್ ಮುಸ್ತಫಾರವರು ಇತ್ತೀಚೆಗೆ ಹೃದಯಾಘಾತದಿಂದ ಸೌದಿ ಅರೇಬಿಯಾದ ರಿಯಾದಿನಲ್ಲಿ ಮರಣಹೊಂದಿದ್ದು ಅವರ ಅಂತ್ಯಕ್ರಿಯೆಯನ್ನು ರಿಯಾದ್ ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.

14/10/2024ರಂದು ಹೃದಯಾಘಾತದಿಂದ ಮರಣ ಹೊಂದಿದ ಮಾಹಿತಿ ಸಿಕ್ಕ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರು ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ .

ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ಕಾನೂನಾತ್ಮಕ ದಾಖಲೆ ಪತ್ರಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ಸೌದಿ ಅರೇಬಿಯಾದ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರಾದ ಮಜೀದ್ ವಿಟ್ಲ, ಅಶ್ರಫ್ KMS, ದಮ್ಮಾಮ್ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷ ಬಾಷಾ ಗಂಗಾವಳಿ, ಮೃತರ ಸ್ಪೋನ್ಸರ್ ಶಂಸೀರ್ ಮಂಜೇಶ್ವರ, ಸಹೋದರ ಮುಹಮ್ಮದ್ ಮುಹ್ಸಿನ್, KMYAಯ ಅಝೀಝ್ ಕಾಟಿಪಳ್ಳ, ಸೈಫುಲ್ಲಾ ಕಾಟಿಪಳ್ಳ, ಊರಿನಲ್ಲಿ ಬೇಕಾದ ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಮುಹಮ್ಮದ್ ಇಕ್ಬಾಲ್ ಸಹಕರಿಸಿದ್ದಾರೆ. ಪೂರಕವಾಗಿ ಕುಟುಂಬಸ್ಥರು ಇನ್ನಿತರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ ನಿಭಾಯಿಸಿದ್ದಾರೆ.

ರಿಯಾದಿನ ಅಲ್ ರಾಜಿ ಮಸ್ಜಿದ್‌ನಲ್ಲಿ ಮಯ್ಯಿತ್ ನಮಾಝ್ ನಿರ್ವಹಿಸಿ ಅಲ್-ನಸೀಮ್ ಸಾರ್ವಜನಿಕ ದಫನ ಭೂಮಿಗೆ ಮೃತದೇಹವನ್ನು ಕೊಂಡೊಯ್ಯಲಾಯಿತು.

ನಸೀಂನಲ್ಲಿ ನಡೆದ ದಫನ್ ಕಾರ್ಯದ ನೇತೃತ್ವವವನ್ನು ಕೆಸಿಎಫ್ ರಿಯಾದ್ ಝೋನ್ ಅಧ್ಯಕ್ಷರಾದ ಮುಸ್ತಫಾ ಸ‌ಅದಿ ವಹಿಸಿದ್ದರು ಹಾಗೂ ಕೆಸಿಎಫ್ ನಾಯಕರಾದ ಯೂಸುಫ್ ಹಾಜಿ ಕಳಂಜಿಬೈಲ್, ರಝಾಕ್ ಬಾರ್ಯ, ಖಲೀಲ್ ಝುಹ್ರಿ, KMYA ಯ ನಾಯಕರು, ಸದಸ್ಯರು ಸೇರಿದಂತೆ ಕೆಸಿಎಫ್ ರಾಷ್ಟ್ರೀಯ, ಝೋನ್ ನಾಯಕರು, ಕಾರ್ಯಕರ್ತರು,  ಕುಟುಂಬಸ್ಥರು ಹಾಗೂ ಸ್ಥಳೀಯರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.

error: Content is protected !! Not allowed copy content from janadhvani.com