ದುಬೈ: ದುಬೈನಿಂದ ಕೋಝಿಕ್ಕೋಡ್ಗೆ ತೆರಳುತ್ತಿದ್ದ ವಿಮಾನದಲ್ಲಿ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೋರ್ವ ಅವಾಂತರ ಸೃಷ್ಟಿಸಿದ ಕಾರಣ ವಿಮಾನವನ್ನು ವಾಪಸ್ ಇಳಿಸಿದ ಘಟನೆ ನಡೆದಿದೆ. ಪೊಲೀಸರು ಆಗಮಿಸಿ ಪ್ರಯಾಣಿಕನನ್ನು ಕರೆದೊಯ್ದ ನಂತರ ವಿಮಾನವನ್ನು ಮತ್ತೆ ಟೇಕಾಫ್ ಮಾಡಲಾಗಿದೆ.
ಭಾನುವಾರ ನಸುಕಿನ 1:30ಕ್ಕೆ ದುಬೈನಿಂದ ಕೋಝಿಕ್ಕೋಡ್ಗೆ ಹೊರಟಿದ್ದ ಫ್ಲೈ ದುಬೈ ವಿಮಾನದಲ್ಲಿ ಕೇರಳದ ವೇಂಗರದ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಗಲಾಟೆ ಎಬ್ಬಿಸಿದ ಎಂದು ಸಹ ಪ್ರಯಾಣಿಕರು ತಿಳಿಸಿದ್ದಾರೆ. ದುಬೈನಿಂದ ವಿಮಾನ ಟೇಕಾಫ್ ಆದ ಮೇಲೂ ಗಲಾಟೆ ಮಾಡುತ್ತಲೇ ಇದ್ದ. ಇತರ ಪ್ರಯಾಣಿಕರಿಗೆ ತೊಂದರೆಯಾದ ಕಾರಣ ವಿಮಾನವನ್ನು ವಾಪಸ್ ಇಳಿಸಲಾಯಿತು. ಪ್ರಯಾಣಿಕರಿಂದ ಮಾಹಿತಿ ಸಂಗ್ರಹಿಸಿ ದುಬೈ ಪೊಲೀಸರು ಆತನನ್ನು ಕರೆದೊಯ್ದಿದ್ದಾರೆ. ಕರಿಪುರಕ್ಕೆ ಬೆಳಗ್ಗೆ 7ಕ್ಕೆ ತಲುಪಬೇಕಿದ್ದ ವಿಮಾನ 10:30ಕ್ಕೆ ತಲುಪಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು