ಕರಾಚಿ, ಪಾಕಿಸ್ತಾನ: ದೆಹಲಿಯಿಂದ ಸೌದಿ ಅರೇಬಿಯಾದ ಜಿದ್ದಾಗೆ ಹೊರಟಿದ್ದ ಇಂಡಿಗೋ ವಿಮಾನ ವೈದ್ಯಕೀಯ ಪರಿಸ್ಥಿತಿಯಿಂದ ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಇಂಡಿಗೋದ 6E 63 ವಿಮಾನವು ಶನಿವಾರ ರಾತ್ರಿ 8.30 ಕ್ಕೆ ದೆಹಲಿಯಿಂದ ಹೊರಟಿತು, ಆದರೆ ಎರಡು ಗಂಟೆಗಳ ನಂತರ ವಿಮಾನದಲ್ಲಿ ವ್ಯಕ್ತಿಯೊಬ್ಬರು ಗಂಭೀರ ಆರೋಗ್ಯ ಸಮಸ್ಯೆಗೆ ಒಳಗಾದ ಹಿನ್ನೆಲೆ ಪಾಕಿಸ್ತಾನದಲ್ಲಿ ವಿಮಾನ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ.
ಜಿಯೋ ನ್ಯೂಸ್ ಪ್ರಕಾರ, 55 ವರ್ಷದ ಭಾರತೀಯರೊಬ್ಬರು ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿದ್ದು, ಅವರಿಗೆ ತಕ್ಷಣದ ವೈದ್ಯಕೀಯ ನೆರವು ಹಿನ್ನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಅನಾರೋಗ್ಯಗೊಂಡ ಪ್ರಯಾಣಿಕರಿಗೆ ತಕ್ಷಣಕ್ಕೆ ಆಕ್ಸಿಜನ್ ನೀಡಿದರೂ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆ ಭಾರತೀಯ ವಿಮಾನಯಾನ ಸಂಸ್ಥೆ ಕರಾಚಿ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ ಅನ್ನು ಸಂಪರ್ಕಿಸಿದೆ.
ಮಾನವೀಯ ನೆಲೆ ಆಧಾರದ ಮೇಲೆ ಕರಾಚಿ ಏರ್ ಟ್ರಾಫಿಕ್ ಕಂಟ್ರೋಲ್ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶಕ್ಕೆ ಅವಕಾಶ ನೀಡಿತು. ವಿಮಾನ ಲ್ಯಾಂಡ್ ಆಗುತ್ತಿದ್ದಂತೆ, ಅಲ್ಲಿ ವೈದ್ಯಕೀಯ ತಂಡವು ಪ್ರಯಾಣಿಕರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಲು ವಿಮಾನ ಪ್ರವೇಶಿಸಿದರು.
ಈ ಸಮಸ್ಯೆ ಪರಿಹಾರ ಕಂಡ ಬಳಿಕ ವಿಮಾನವು ಕರಾಚಿಯಿಂದ ಸೌದಿ ಅರೇಬಿಯಾದ ಜಿದ್ದಾಗೆ ತೆರಳುವ ಬದಲಾಗಿ ದೆಹಲಿಗೆ ವಾಪಸ್ ಮರಳಿ ಅನಾರೋಗ್ಯಗೊಂಡ ಪ್ರಯಾಣಿಕನನ್ನು ಇಳಿಸಿದ ಬಳಿಕ ಮತ್ತೆ ಜಿದ್ದಾಕೆ ಹೊರಟಿದೆ ಎಂದು ವರದಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ