ಪುತ್ತೂರು : ನೂತನ ಸಾಂಘಿಕ ವರ್ಷದ ಸದಸ್ಯತ್ವ ಮತ್ತು ಘಟಕಗಳ ಪುನರ್ರಚನೆ ಆಯ್ಕೆ ಪ್ರಕ್ರಿಯೆಯ ಮಾಹಿತಿ ಕಾರ್ಯಾಗಾರ ದಿನಾಂಕ 26.12.2024 ಗುರುವಾರದಂದು ಕೆಎಂಜೆ ಹಳೆಯ ಕಛೇರಿ ಪುತ್ತೂರಿನಲ್ಲಿ ನಡೆಯಿತು.

ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ಝೋನ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಝೋನ್ ಅಧ್ಯಕ್ಷರಾದ ಕೆ ಬಿ ಕಾಸಿಂ ಹಾಜಿ ಮಿತ್ತೂರುರವರು ಅಧ್ಯಕ್ಷತೆ ವಹಿಸಿದ್ದರು. ಸಂಘಟನೆಯ ಜೀವಾಳ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಪ್ರದಾನ ಕಾರ್ಯದರ್ಶಿಯಾದ ಮೌಲನಾ ಜಿ. ಎಂ. ಕಾಮಿಲ್ ಸಖಾಫಿರವರು ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಝೋನ್ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಬಪ್ಪಳಿಗೆ ಪ್ರಾಸ್ತಾವಿಕ ಮಾತನ್ನಾಡಿದರು. ಪುತ್ತೂರು ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಅಬ್ದುಲ್ ಜಲೀಲ್ ಸಖಾಫಿ ಜಾಲ್ಸೂರು, ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಯೂಸುಫ್ ಸಯೀದ್ ಪುತ್ತೂರು, ಪುತ್ತೂರು ಝೋನ್ ಕೋಶಾಧಿಕಾರಿ ಅಬ್ದುಲ್ ಕರೀಂ ಹಾಜಿ ಚೆನ್ನಾರ್ರವರು ಮಾತನಾಡಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸುನ್ನಿ ಮದ್ರಸ ಅಸೋಸಿಯೇಷನ್ ದಕ್ಷಿಣ ಕನ್ನಡ ಸೌತ್ ಜಿಲ್ಲಾಧ್ಯಕ್ಷರಾದ ಯೂಸುಫ್ ಹಾಜಿ ಸಾಜ, ಎಸ್ವೈಎಸ್ ಪುತ್ತೂರು ಝೋನ್ ಅಧ್ಯಕ್ಷರಾದ ಅಬೂಶಝಾ ಉಸ್ತಾದ್, ಕರ್ನಾಟಕ ಮುಸ್ಲಿಂ ಜಮಾಅತ್ ನಾಯಕರಾದ ಆದಂ ಹಾಜಿ ಪಡೀಲ್, ಇಸ್ಮಾಯಿಲ್ ಹಾಜಿ ಬನ್ನೂರು, ಇಸ್ಮಾಯಿಲ್ ಹಾಜಿ ಕೊಂಬಾಳಿ, ಇಸ್ಮಾಯಿಲ್ ಹಾಜಿ ಹಸನ್ ನಗರ, ಯೂಸುಫ್ ಹಾಜಿ ಸೂರಿಕುಮೇರ್ ಮೊದಲಾದವರು ಉಪಸ್ಥಿತರಿದ್ದರು.

ಪುತ್ತೂರು ಝೋನ್ ವ್ಯಾಪ್ತಿಯ ಸರ್ಕಲ್, ಯುನಿಟ್ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸದಸ್ಯರಾದ ಅಬ್ದುಲ್ಲಾ ಉಸ್ತಾದ್ ಬನ್ನೂರವರು ಸ್ವಾಗತಿಸಿದರು. ಉಸ್ಮಾನ್ ಮುಸ್ಲಿಯಾರ್ ಕುಂಬ್ರರವರು ಧನ್ಯವಾದಗೈದರು.
ವರದಿ : ಅಬೂಸೈಹಾನ್
26.12.2024
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ