ಚಿಕ್ಕಮಗಳೂರು ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಜಾಮಿಯಾ ಅರೇಬಿಯ ಕಂಝುಲ್ ಈಮಾನ್ ಸಂಸ್ಥೆಯಲ್ಲಿ 15 ವರ್ಷದ ಬಾಲಕ ಮುಹಮ್ಮದ್ ಕಲಂದರ್ ಕೇವಲ 45 ದಿನಗಳ ಅವಧಿಯಲ್ಲಿ ಪವಿತ್ರ ಖುರ್ಆನ್ ಸಂಪೂರ್ಣವಾಗಿ ಕಂಠಪಾಠ ಮಾಡಿ ಇತಿಹಾಸ ಸೃಷ್ಟಿಸಿದ್ದಾನೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾದ ಅಲ್ ಹಾಜ್ ಫೈರೋಜ್ ಅಹಮದ್ ರಜ್ವಿ ರವರು ತಿಳಿಸಿದ್ದಾರೆ.
ಈ ಮೂಲಕ ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಜ್ವಿ ರವರ ಸದರಿ ವಿದ್ಯಾರ್ಥಿಯು ಹಾಸನ ಮೂಲದವನಾಗಿದ್ದು ತಂದೆಯನ್ನು ಕಳೆದುಕೊಂಡ ಅನಾಥ ಬಾಲಕ ತಾಯಿಯು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಈ ನಿಟ್ಟಿನಲ್ಲಿ ಸಂಸ್ಥೆಯಲ್ಲಿ ಶಾಹೀನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಸಹಯೋಗದೊಂದಿಗೆ ನಡೆಸಲಾಗುತ್ತಿರುವ ಹೈಸ್ಕೂಲ್ ವಿದ್ಯಾಬ್ಯಾಸದೊಂದಿಗೆ ಕೇವಲ 45 ದಿನಗಳಲ್ಲಿ ಖುರ್ಆನ್ ಸಂಪೂರ್ಣವಾಗಿ ಕಂಠಪಾಠ ಮಾಡಿ ಇತಿಹಾಸ ನಿರ್ಮಿಸಿರುವುದು ಪ್ರಪಂಚದಲ್ಲಿ ಪ್ರಥಮ ವಿದ್ಯಾರ್ಥಿಯಾಗಿರುವ ಬಾಲಕನಿಗೆ ಹಲವಾರು ಮದ್ರಸಗಳಿಂದ ಹಾಗೂ ದೇಶಾದ್ಯಂತ ಧರ್ಮಗುರುಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಹಾಗು ಸಂಸ್ಥೆಯ ಅಧ್ಯಕ್ಷರಾದ ಅಲ್ ಹಾಜ್ ಮೊಹಮ್ಮದ್ ಶಾಹಿದ್ ರಜ್ವಿ ರವರು ಬಾಲಕನಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಉನ್ನತ ಶಿಕ್ಷಣಕ್ಕೆ ಸಂಸ್ಥೆಯ ವತಿಯಿಂದ ಹಣಕಾಸು ನೆರವು ನೀಡುವುದಾಗಿ ಘೋಷಿಸಿದ್ದಾರೆ ಈತನಿಗೆ ದಾಖಲೆ ನಿರ್ಮಿಸಲು ಶ್ರಮಿಸಿದ ಅಧ್ಯಾಪಕರಿಗೆ ಧನ್ಯವಾದಗಳನ್ನು ಸಲ್ಲಿಸಲಾಗಿದೆ ಇದು ನಿಜಕ್ಕೂ ದೇವರ ವಿಶೇಷ ಅನುಗ್ರಹವಾಗಿದೆ ಎಂದು ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ