ಕೋಯಿಕ್ಕೋಡ್: ಹೈಡ್ರಾಲಿಕ್ ವೈಫಲ್ಯದಿಂದ ಏರ್ ಇಂಡಿಯಾ ವಿಮಾನ ಕರಿಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ದುಬೈನಿಂದ ಕರಿಪುರ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವಿಮಾನ ಎಮರ್ಜೆನ್ಸಿ ಅಲರ್ಟ್ ನೀಡಿ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ದುಬೈನಿಂದ ಕೋಝಿಕ್ಕೋಡ್ಗೆ ಬಂದ ಏರ್ ಇಂಡಿಯಾ ವಿಮಾನ IX344 ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನದ ಹೈಡ್ರಾಲಿಕ್ ವೈಫಲ್ಯದಿಂದಾಗಿ ಲ್ಯಾಂಡಿಂಗ್ ಗೇರ್ ಕೆಲಸ ಮಾಡದ ಕಾರಣ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೈಡ್ರಾಲಿಕ್ ವೈಫಲ್ಯವನ್ನು ಗಮನಿಸಿದ ನಂತರ, ವಿಮಾನ ನಿಲ್ದಾಣಕ್ಕೆ ಮಾಹಿತಿಯನ್ನು ರವಾನಿಸಲಾಯಿತು. ನಂತರ ತುರ್ತು ಅಲರ್ಟ್ ನೀಡಲಾಗಿದೆ. ಅಷ್ಟರಲ್ಲಿ ವಿಮಾನ ನಿಲ್ದಾಣದಲ್ಲಿ ಸಕಲ ವ್ಯವಸ್ಥೆ ಮಾಡಲಾಗಿತ್ತು. ಹಲವಾರು ಆಂಬ್ಯುಲೆನ್ಸ್ಗಳು ಮತ್ತು ಅಗ್ನಿಶಾಮಕ ವ್ಯವಸ್ಥೆಗಳನ್ನು ರನ್ವೇಯಲ್ಲಿ ಸಜ್ಜುಗೊಳಿಸಲಾಯಿತು. ಬಳಿಕ ವಿಮಾನವು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದ್ದು, ಭಾರಿ ಅಪಘಾತವೊಂದು ತಪ್ಪಿದಂತಾಗಿದೆ.
ಇದಕ್ಕೆ ಸಮಾನವಾದ ಘಟನೆಯೊಂದು ಇತ್ತೀಚೆಗೆ ದಕ್ಷಿಣ ಕೊರಿಯಾದಲ್ಲಿ ನಡೆದು, ಲ್ಯಾಂಡಿಂಗ್ ವೇಳೆ ವಿಮಾನಕ್ಕೆ ಬೆಂಕಿ ಹೊತ್ತಿ ಉರಿದ ಪರಿಣಾಮ 179 ಮಂದಿ ಪ್ರಯಾಣಿಕರು ಮೃತಪಟ್ಟಿದ್ದರು.
175 ಪ್ರಯಾಣಿಕರು ಮತ್ತು 6 ಮಂದಿ ಸಿಬ್ಬಂದಿಗಳನ್ನು ಹೊತ್ತೊಯ್ಯುತ್ತಿದ್ದ ವಿಮಾನವು ದಕ್ಷಿಣ ಕೊರಿಯಾದ ದಕ್ಷಿಣದಲ್ಲಿರುವ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ನಂತರ ರನ್ವೇಯಿಂದ ಸ್ಕಿಡ್ ಆಗಿ ಕಾಂಕ್ರಿಟ್ ತಡೆಗೋಡೆಗೆ ಅಪ್ಪಳಿಸಿದಾಗ ಬೆಂಕಿ ಆವರಿಸಿದೆ. ಅದರ ಲ್ಯಾಂಡಿಂಗ್ ಗೇರ್ ಅನ್ನು ನಿಯೋಜಿಸಲು ವಿಫಲವಾದಾಗ ಈ ದುರ್ಘಟನೆ ನಡೆದಿತ್ತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ