ಕೋಯಿಕ್ಕೋಡ್: ಹೈಡ್ರಾಲಿಕ್ ವೈಫಲ್ಯದಿಂದ ಏರ್ ಇಂಡಿಯಾ ವಿಮಾನ ಕರಿಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ದುಬೈನಿಂದ ಕರಿಪುರ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವಿಮಾನ ಎಮರ್ಜೆನ್ಸಿ ಅಲರ್ಟ್ ನೀಡಿ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ದುಬೈನಿಂದ ಕೋಝಿಕ್ಕೋಡ್ಗೆ ಬಂದ ಏರ್ ಇಂಡಿಯಾ ವಿಮಾನ IX344 ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನದ ಹೈಡ್ರಾಲಿಕ್ ವೈಫಲ್ಯದಿಂದಾಗಿ ಲ್ಯಾಂಡಿಂಗ್ ಗೇರ್ ಕೆಲಸ ಮಾಡದ ಕಾರಣ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೈಡ್ರಾಲಿಕ್ ವೈಫಲ್ಯವನ್ನು ಗಮನಿಸಿದ ನಂತರ, ವಿಮಾನ ನಿಲ್ದಾಣಕ್ಕೆ ಮಾಹಿತಿಯನ್ನು ರವಾನಿಸಲಾಯಿತು. ನಂತರ ತುರ್ತು ಅಲರ್ಟ್ ನೀಡಲಾಗಿದೆ. ಅಷ್ಟರಲ್ಲಿ ವಿಮಾನ ನಿಲ್ದಾಣದಲ್ಲಿ ಸಕಲ ವ್ಯವಸ್ಥೆ ಮಾಡಲಾಗಿತ್ತು. ಹಲವಾರು ಆಂಬ್ಯುಲೆನ್ಸ್ಗಳು ಮತ್ತು ಅಗ್ನಿಶಾಮಕ ವ್ಯವಸ್ಥೆಗಳನ್ನು ರನ್ವೇಯಲ್ಲಿ ಸಜ್ಜುಗೊಳಿಸಲಾಯಿತು. ಬಳಿಕ ವಿಮಾನವು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದ್ದು, ಭಾರಿ ಅಪಘಾತವೊಂದು ತಪ್ಪಿದಂತಾಗಿದೆ.
ಇದಕ್ಕೆ ಸಮಾನವಾದ ಘಟನೆಯೊಂದು ಇತ್ತೀಚೆಗೆ ದಕ್ಷಿಣ ಕೊರಿಯಾದಲ್ಲಿ ನಡೆದು, ಲ್ಯಾಂಡಿಂಗ್ ವೇಳೆ ವಿಮಾನಕ್ಕೆ ಬೆಂಕಿ ಹೊತ್ತಿ ಉರಿದ ಪರಿಣಾಮ 179 ಮಂದಿ ಪ್ರಯಾಣಿಕರು ಮೃತಪಟ್ಟಿದ್ದರು.
175 ಪ್ರಯಾಣಿಕರು ಮತ್ತು 6 ಮಂದಿ ಸಿಬ್ಬಂದಿಗಳನ್ನು ಹೊತ್ತೊಯ್ಯುತ್ತಿದ್ದ ವಿಮಾನವು ದಕ್ಷಿಣ ಕೊರಿಯಾದ ದಕ್ಷಿಣದಲ್ಲಿರುವ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ನಂತರ ರನ್ವೇಯಿಂದ ಸ್ಕಿಡ್ ಆಗಿ ಕಾಂಕ್ರಿಟ್ ತಡೆಗೋಡೆಗೆ ಅಪ್ಪಳಿಸಿದಾಗ ಬೆಂಕಿ ಆವರಿಸಿದೆ. ಅದರ ಲ್ಯಾಂಡಿಂಗ್ ಗೇರ್ ಅನ್ನು ನಿಯೋಜಿಸಲು ವಿಫಲವಾದಾಗ ಈ ದುರ್ಘಟನೆ ನಡೆದಿತ್ತು.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್