ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಮಝಾರೇ ಶರೀಫ್ ಗಳಲ್ಲೊಂದಾದ ಕನ್ಯಾನ ಹಝ್ರತ್ ಶಾಹುಲ್ ಹಮೀದ್ ವಲಿಯುಲ್ಲಾಹಿ ಖ.ಸಿ.ರವರ ಹೆಸರಲ್ಲಿ ಪ್ರತೀ ಮೂರು ವರ್ಷಕ್ಕೊಮ್ಮೆ ನಡೆಸಲ್ಪಡುವ ಉದಯಾಸ್ತಮಾನ ಉರೂಸ್ ಮುಬಾರಕ್ ಗೆ ಇಂದು ವಿದ್ಯುಕ್ತ ಚಾಲನೆ ಲಭಿಸಲಿದೆ. ಜನವರಿ 9 ರಿಂದ ಜನವರಿ 19 ರ ತನಕ ಉರೂಸ್ ಕಾರ್ಯಕ್ರಮ ನಡೆಯಲಿದೆ.

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ ಪಿ ಉಸ್ತಾದರ ನೇತೃತ್ವದಲ್ಲಿ ನಡೆಯುವ ಉದಯಾಸ್ತಮಾನ ಉರೂಸ್ ಮುಬಾರಕಿನ ಉದ್ಘಾಟನಾ ದಿನವಾದ ಇಂದು ಸಯ್ಯಿದ್ ಶಹೀರ್ ಅಲ್ ಬುಖಾರಿ ಪೊಸೋಟು, ಮೌಲಾನ ಪೇರೋಡು ಅಬ್ದುಲ್ ರಹಿಮಾನ್ ಸಖಾಫಿ , ಕೆ.ಎಂ ಇಬ್ರಾಹಿಂ ಫೈಝಿ ಕನ್ಯಾನ ಮುಂತಾದವರು ಭಾಗವಹಿಸಲಿದ್ದಾರೆ
ಕೇರಳ ಮತ್ತು ಕರ್ನಾಟಕದ ಸುಪ್ರಸಿದ್ದ ವಾಗ್ಮಿಗಳೂ ಸಾದಾತುಗಳೂ ಭಾಗವಹಿಸುವ ಮುಂದಿನ 9 ದಿವಸಗಳ ಕಾಲ ನಡೆಯುವ ಧಾರ್ಮಿಕ ಮತ ಪ್ರವಚನ ಹಾಗೂ ಕೊನೆಯ ದಿನದ ಮೌಲಿದ್ ಮತ್ತು ಅನ್ನದಾನ ಕಾರ್ಯಕ್ರಮದಲ್ಲಿ ಸರ್ವರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ದುಲ್ ಫುಖಾರ್ ಗಲ್ಫ್ ಕಮಿಟಿ ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ದುಲ್ ಫುಖಾರ್ ಗಲ್ಫ್ ಕಮಿಟಿಯ ಪ್ರಾಯೋಜಕತ್ವದಲ್ಲಿ ಪ್ರತಿ ದಿನ ರಾತ್ರಿಯ ಉರೂಸ್ ಕಾರ್ಯಕ್ರಮವನ್ನು ಆನ್ ಲೈನ್ ಮೂಲಕ ನೇರ ಪ್ರಸಾರ ಮಾಡಲಾಗುತ್ತದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ