ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಮಝಾರೇ ಶರೀಫ್ ಗಳಲ್ಲೊಂದಾದ ಕನ್ಯಾನ ಹಝ್ರತ್ ಶಾಹುಲ್ ಹಮೀದ್ ವಲಿಯುಲ್ಲಾಹಿ ಖ.ಸಿ.ರವರ ಹೆಸರಲ್ಲಿ ಪ್ರತೀ ಮೂರು ವರ್ಷಕ್ಕೊಮ್ಮೆ ನಡೆಸಲ್ಪಡುವ ಉದಯಾಸ್ತಮಾನ ಉರೂಸ್ ಮುಬಾರಕ್ ಗೆ ಇಂದು ವಿದ್ಯುಕ್ತ ಚಾಲನೆ ಲಭಿಸಲಿದೆ. ಜನವರಿ 9 ರಿಂದ ಜನವರಿ 19 ರ ತನಕ ಉರೂಸ್ ಕಾರ್ಯಕ್ರಮ ನಡೆಯಲಿದೆ.

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ ಪಿ ಉಸ್ತಾದರ ನೇತೃತ್ವದಲ್ಲಿ ನಡೆಯುವ ಉದಯಾಸ್ತಮಾನ ಉರೂಸ್ ಮುಬಾರಕಿನ ಉದ್ಘಾಟನಾ ದಿನವಾದ ಇಂದು ಸಯ್ಯಿದ್ ಶಹೀರ್ ಅಲ್ ಬುಖಾರಿ ಪೊಸೋಟು, ಮೌಲಾನ ಪೇರೋಡು ಅಬ್ದುಲ್ ರಹಿಮಾನ್ ಸಖಾಫಿ , ಕೆ.ಎಂ ಇಬ್ರಾಹಿಂ ಫೈಝಿ ಕನ್ಯಾನ ಮುಂತಾದವರು ಭಾಗವಹಿಸಲಿದ್ದಾರೆ
ಕೇರಳ ಮತ್ತು ಕರ್ನಾಟಕದ ಸುಪ್ರಸಿದ್ದ ವಾಗ್ಮಿಗಳೂ ಸಾದಾತುಗಳೂ ಭಾಗವಹಿಸುವ ಮುಂದಿನ 9 ದಿವಸಗಳ ಕಾಲ ನಡೆಯುವ ಧಾರ್ಮಿಕ ಮತ ಪ್ರವಚನ ಹಾಗೂ ಕೊನೆಯ ದಿನದ ಮೌಲಿದ್ ಮತ್ತು ಅನ್ನದಾನ ಕಾರ್ಯಕ್ರಮದಲ್ಲಿ ಸರ್ವರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ದುಲ್ ಫುಖಾರ್ ಗಲ್ಫ್ ಕಮಿಟಿ ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ದುಲ್ ಫುಖಾರ್ ಗಲ್ಫ್ ಕಮಿಟಿಯ ಪ್ರಾಯೋಜಕತ್ವದಲ್ಲಿ ಪ್ರತಿ ದಿನ ರಾತ್ರಿಯ ಉರೂಸ್ ಕಾರ್ಯಕ್ರಮವನ್ನು ಆನ್ ಲೈನ್ ಮೂಲಕ ನೇರ ಪ್ರಸಾರ ಮಾಡಲಾಗುತ್ತದೆ.
















ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ