ಮಂಗಳೂರು, ಜ.17: ಬಂದೂಕು ತೋರಿಸಿ ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ಭಾರೀ ದರೋಡೆ ನಡೆದಿದೆ.

ಮಂಗಳೂರಿನ ಕೆ.ಸಿ ರೋಡ್ ಶಾಖೆಯ ಕೋಟೆಕಾರು ಸಹಕಾರಿ ಬ್ಯಾಂಕಿನಲ್ಲಿ ದರೋಡೆಯಾಗಿದೆ. ಹಾಡಹಗಲೇ ಬ್ಯಾಂಕ್ಗೆ ನುಗ್ಗಿದ ಐವರು ಆಘಂತುಕರು ಬಂದೂಕು ತೋರಿಸಿ ದರೋಡೆ ಮಾಡಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಫಿಯೆಟ್ ಕಾರಿನಲ್ಲಿ ಬಂದಿದ್ದ ದರೋಡೆಕೋರರಿಂದ ಘಟನೆ ನಡೆದಿದೆ ಎಂದು ಮಾಹಿತಿ ದೊರೆತಿದೆ.
ಬಂದೂಕು ತೋರಿಸಿ ದರೋಡೆ ಮಾಡಿರುವ ಈ ಗ್ಯಾಂಗ್ ಬ್ಯಾಂಕ್ನಲ್ಲಿದ್ದ ಸುಮಾರು 15 ಲಕ್ಷ ರೂಪಾಯಿ ನಗದು ಮತ್ತು ಸುಮಾರು 10 ಕೋಟಿಯ ಚಿನ್ನಾಭರಣ ಕಳ್ಳತನ ಮಾಡಿ ಮಂಗಳೂರು ಕಡೆಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕೆಸಿ ರೋಡ್ ಮುಸ್ಲಿಂ ಬಾಹುಳ್ಯ ಪ್ರದೇಶವಾಗಿರುವುದರಿಂದ ಶುಕ್ರವಾರ ಮಧ್ಯಾಹ್ನ ಅಂಗಡಿಗಳೆಲ್ಲ ಮುಚ್ಚಿ ಮುಸ್ಲಿಮರು ಮಸೀದಿಗೆ ತೆರಲುವ ಸಂಧರ್ಬವನ್ನೇ ದರೋಡೆಕೋರರು ಆರಿಸಿಕೊಂಡಿದ್ದರು. ಅದೂ ಅಲ್ಲದೇ ಬ್ಯಾಂಕಿನ ಸಿಸಿಟಿವಿ ಕೂಡಾ ದುರಸ್ತಿ ಕಾರ್ಯದಲ್ಲಿತ್ತು ಹಾಗೂ ಚಿನ್ನಾಭರಣಗಳನ್ನಿಟ್ಟ ಖಜಾನೆ ತೆರದೇ ಇತ್ತು ಎನ್ನಲಾಗುತ್ತಿದೆ.
ಮಧ್ಯಾಹ್ನ 1.15 ಗಂಟೆ ಸುಮಾರಿಗೆ ಖದೀಮರು ಗೋಣಿ ಚೀಲದಲ್ಲಿ ನಗದು ಮತ್ತು ಚಿನ್ನಾಭರಣಗಳನ್ನು ಹೊತ್ತು ಫಿಯೇಟ್ ಕಾರಿನಲ್ಲಿ ಪರಾರಿಯಾಗುವ ದೃಶ್ಯವು ಸಮೀಪದ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರ ತಂಡ ದೌಡಾಯಿಸಿ ಪರಿಶೀಲಿಸುತ್ತಿದೆ. ಬ್ಯಾಂಕಿಗೆ ಸ್ಥಳೀಯ ಶಾಸಕರಾಗಿರುವ ಯುಟಿ ಖಾದರ್ ಆಗಮಿಸಿ ಸಿಬ್ಬಂದಿ ಜೊತೆ ಮಾತನಾಡಿದ್ದಾರೆ.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ