ರಿಯಾದ್ :ಅಲ್ ರಾಸ್ ನಲ್ಲಿ ಹಠಾತ್ ಅನಾರೋಗ್ಯಕ್ಕೊಳಗಾಗಿ ಮರಣ ಹೊಂದಿದ ಸಯ್ಯಿದ್ ಫೈರೋಝ್ ರವರ ಅಂತ್ಯಕ್ರಿಯೆಯನ್ನು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಅಲ್ ಕಸೀಮ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.
ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಮಾಹಿತಿ ತಿಳಿದ ಕೂಡಲೇ ಅನಿವಾಸಿ ಕನ್ನಡಿಗರ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಅಲ್ ಕಸೀಮ್ ಝೋನ್ ಸಾಂತ್ವನ ಇಲಾಖೆಯ ನಾಯಕರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.
ಚಿಕಿತ್ಸೆ ಫಲಿಸದೆ 15/01/2025ರಂದು ಮರಣ ಹೊಂದಿದ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಅಲ್ ಕಸೀಮ್ ಝೋನ್ ಸಾಂತ್ವನ ಇಲಾಖೆ ನಾಯಕರು ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ.
ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ಕಾನೂನಾತ್ಮಕ ದಾಖಲೆ ಪತ್ರಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಬೇಕಾಗಿದೆ.
ಈ ನಿಟ್ಟಿನಲ್ಲಿ ಸೌದಿ ಅರೇಬಿಯಾದ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಾಂತ್ವನ ಇಲಾಖೆ ಅಧ್ಯಕ್ಷರಾದ ಭಾಷಾ ಗಂಗಾವಳಿ ಅಲ್ ಕಸೀಮ್ ಕೆಸಿಎಫ್ ಸಾಂತ್ವನ ಇಲಾಖೆ ನಾಯಕರಾದ ತಾಜುದ್ದೀನ್ ಕೆಮ್ಮಾರ, ಫೈಝಲ್ ಮಠ ಸೆಕ್ಟರ್ ನಾಯಕರಾದ ರಶೀದ್ ಬೆಳ್ಳಾರೆ ಯೂಸುಫ್ ಉಚ್ಚಿಲ ಮೃತರ ಕುಟುಂಬಸ್ಥರಾದ ಸಲಾಂ ಹಳೆಯಂಗಡಿ ರಿಯಾದ್, ಮಜೀದ್ , ರಿಯಾದ್ ಮುಖ್ತಾರ್ ಹಳೆಯಂಗಡಿ , ಮುಹ್ಯುದ್ದೀನ್ ಶಿವಮೊಗ್ಗ, ಹನೀಫ್ ಶಿವಮೊಗ್ಗ ಹಾಗೂ ಇನ್ನಿತರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ ನಿಭಾಯಿಸಿದ್ದಾರೆ. ಊರಿನಲ್ಲಿ ಮೃತರ ಕುಟುಂಬಸ್ಥರು ಎಲ್ಲಾ ರೀತಿಯಲ್ಲೂ ಸಹಕರಿಸಿದ್ದಾರೆ.
ಅಲ್ ರಾಸ್ ಅಶ್ಶಾಯಿ ನಲ್ಲಿ ನಡೆದ ದಫನ್ ಕಾರ್ಯದ ನೇತೃತ್ವವವನ್ನು ಕೆಸಿಎಫ್ ಅಲ್ ಕಸೀಮ್ ಝೋನ್ ದಾಯಿಯಾದ ಯಾಕೂಬ್ ಸಖಾಫಿ ವಹಿಸಿದ್ದರು. ಕುಟುಂಬಸ್ಥರು ಹಾಗೂ ಸ್ಥಳೀಯರು ದಫನ ಕಾರ್ಯದಲ್ಲಿ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮೃತರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ