ರಿಯಾದ್ :ಅಲ್ ರಾಸ್ ನಲ್ಲಿ ಹಠಾತ್ ಅನಾರೋಗ್ಯಕ್ಕೊಳಗಾಗಿ ಮರಣ ಹೊಂದಿದ ಸಯ್ಯಿದ್ ಫೈರೋಝ್ ರವರ ಅಂತ್ಯಕ್ರಿಯೆಯನ್ನು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಅಲ್ ಕಸೀಮ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.
ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಮಾಹಿತಿ ತಿಳಿದ ಕೂಡಲೇ ಅನಿವಾಸಿ ಕನ್ನಡಿಗರ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಅಲ್ ಕಸೀಮ್ ಝೋನ್ ಸಾಂತ್ವನ ಇಲಾಖೆಯ ನಾಯಕರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.
ಚಿಕಿತ್ಸೆ ಫಲಿಸದೆ 15/01/2025ರಂದು ಮರಣ ಹೊಂದಿದ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಅಲ್ ಕಸೀಮ್ ಝೋನ್ ಸಾಂತ್ವನ ಇಲಾಖೆ ನಾಯಕರು ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ.
ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ಕಾನೂನಾತ್ಮಕ ದಾಖಲೆ ಪತ್ರಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಬೇಕಾಗಿದೆ.
ಈ ನಿಟ್ಟಿನಲ್ಲಿ ಸೌದಿ ಅರೇಬಿಯಾದ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಾಂತ್ವನ ಇಲಾಖೆ ಅಧ್ಯಕ್ಷರಾದ ಭಾಷಾ ಗಂಗಾವಳಿ ಅಲ್ ಕಸೀಮ್ ಕೆಸಿಎಫ್ ಸಾಂತ್ವನ ಇಲಾಖೆ ನಾಯಕರಾದ ತಾಜುದ್ದೀನ್ ಕೆಮ್ಮಾರ, ಫೈಝಲ್ ಮಠ ಸೆಕ್ಟರ್ ನಾಯಕರಾದ ರಶೀದ್ ಬೆಳ್ಳಾರೆ ಯೂಸುಫ್ ಉಚ್ಚಿಲ ಮೃತರ ಕುಟುಂಬಸ್ಥರಾದ ಸಲಾಂ ಹಳೆಯಂಗಡಿ ರಿಯಾದ್, ಮಜೀದ್ , ರಿಯಾದ್ ಮುಖ್ತಾರ್ ಹಳೆಯಂಗಡಿ , ಮುಹ್ಯುದ್ದೀನ್ ಶಿವಮೊಗ್ಗ, ಹನೀಫ್ ಶಿವಮೊಗ್ಗ ಹಾಗೂ ಇನ್ನಿತರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ ನಿಭಾಯಿಸಿದ್ದಾರೆ. ಊರಿನಲ್ಲಿ ಮೃತರ ಕುಟುಂಬಸ್ಥರು ಎಲ್ಲಾ ರೀತಿಯಲ್ಲೂ ಸಹಕರಿಸಿದ್ದಾರೆ.
ಅಲ್ ರಾಸ್ ಅಶ್ಶಾಯಿ ನಲ್ಲಿ ನಡೆದ ದಫನ್ ಕಾರ್ಯದ ನೇತೃತ್ವವವನ್ನು ಕೆಸಿಎಫ್ ಅಲ್ ಕಸೀಮ್ ಝೋನ್ ದಾಯಿಯಾದ ಯಾಕೂಬ್ ಸಖಾಫಿ ವಹಿಸಿದ್ದರು. ಕುಟುಂಬಸ್ಥರು ಹಾಗೂ ಸ್ಥಳೀಯರು ದಫನ ಕಾರ್ಯದಲ್ಲಿ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮೃತರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್