ಕುವೈತ್ ಸಿಟಿ: ಡಿಕೆಎಸ್ಸಿ ಇದರ ಕುವೈತ್ ರಾಷ್ಟ್ರೀಯ ಸಮಿತಿಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಸಾಲ್ಮಿಯ ಸುನ್ನಿ ಸೆಂಟರ್ ನಲ್ಲಿ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಬಹು ಯೂಸುಫ್ ಅಬ್ಬಾಸ್ ಬಾರೂದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಗೌರವಾಧ್ಯಕ್ಷರಾದ ಶಫೀಕ್ ಅಹ್ಸನಿ ಯವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು DKSC ಕೇಂದ್ರ ಸಮಿತಿ ವೀಕ್ಷಕರಾಗಿ ಆಗಮಿಸಿದ್ದ , *DKSC ವಿಷನ್ ’30* ಇದರ ಚೇರ್ಮನ್ ಹಾತಿಂ ಹಾಜಿ ಕೂಳೂರು ಉದ್ಘಾಟಿಸಿದರು.
ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರ ಮಂಡನೆ ಬಳಿಕ ಸಭೆಯ ಅಂಗೀಕಾರ ಪಡೆಯಲಾಯಿತು.
DKSC ಕುವೈತ್ ಇದರ ರಾಯಭಾರಿಯಾಗಿ ಆಗಮಿಸಿದ್ದ ಅಝೀಝ್ ಮೂಳೂರು ನೇತೃತ್ವದಲ್ಲಿ ಸಮಿತಿ ಬರ್ಕಾಸ್ತು ಗೊಳಿಸಿ ಹೊಸ ಸಮಿತಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಯೂಸುಫ್ ಅಬ್ಬಾಸ್ ಬಾರುದ್ ಅವರನ್ನು ಅಧ್ಯಕ್ಷರಾಗಿ ಮರು ಆಯ್ಕೆ ಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ಲಿಯಾಕತ್ ಗಂಗಾವಳಿ ಹಾಗೂ ಕೋಶಾಧಿಕಾರಿಯಾಗಿ ಇಂತಿಯಾಝ್ ಸೂರಿಂಜೆ
ಅವರನ್ನು ಆರಿಸಲಾಯಿತು.
15 ಮಂದಿ ಕಾರ್ಯಕಾರಿ ಸಮಿತಿಯನ್ನು ಒಳಗೊಂಡ ನೂತನ ಸಮಿತಿಯನ್ನು ರಚಿಸಲಾಯಿತು.
DKSC ಸಂಸ್ಥೆಯ ಹ್ರಸ್ವ ಪರಿಚಯ ಮಾಡುವ ವಿಡಿಯೋ ವನ್ನು ಪ್ರದರ್ಶನ ಮಾಡಲಾಯಿತು.
ಅತಿಥಿಗಳನ್ನು ಸನ್ಮಾನಿಸಿ ಕೇಂದ್ರ ಸಮಿತಿ ಯ ಕಳೆದ ವರ್ಷ ದ ಪ್ರಮುಖ ಯೋಜನೆಗಳನ್ನು ಸಭೆಗೆ ತಿಳಿಸಲಾಯಿತು. ಕುವೈತ್ ನಲ್ಲಿರುವ ಪ್ರಮುಖ ಸಂಘಟನೆಯ ನೇತಾರರ ಅಭಿನಂದನಾ ಭಾಷಣ ಮುಗಿದ ಬಳಿಕ ಗೌರವಾಧ್ಯಕ್ಷರಾದ ಅಬ್ದುರ್ರಹ್ಮಾನ್ ಸಖಾಫಿ ದುಆ ನೆರವೇರಿಸಿದರು. ಶಫೀಕ್ ಅಹ್ಸನಿ ಸ್ವಾಗತಿಸಿ ಳಿಯಾಕತ್ ಗಂಗಾವಳಿ ವಂದಿಸಿದರು. ಕಾರ್ಯಕ್ರಮ ವನ್ನು ಹೈದರ್ ಉಚ್ಚಿಲ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು