ರಿಯಾದ್: ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಭಾರತೀಯನೊಬ್ಬನನ್ನು ಆತನ ಮಗ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಸೇಫ್ಟಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಲಕ್ನೋ ಮೂಲದ ಶ್ರೀಕೃಷ್ಣ ಬೃಗ್ನಾಥ್ ಯಾದವ್ ಅವರನ್ನು ಅವರ ಮಗ ಕುಮಾರ್ ಯಾದವ್ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಪ್ರಕರಣದಲ್ಲಿ ಮಗನನ್ನು ಬಂಧಿಸಲಾಗಿದೆ.
ದೇಶದಲ್ಲಿ ಓದುತ್ತಿರುವಾಗಲೇ ಮಗ ಕುಮಾರ್ ಯಾದವ್ ನನ್ನು ಮಾದಕ ವ್ಯಸನದಿಂದ ಪಾರು ಮಾಡಲು ಅವನ ತಂದೆ ಶ್ರೀಕೃಷ್ಣ ಒಂದೂವರೆ ತಿಂಗಳ ಹಿಂದೆ ಸೌದಿ ಅರೇಬಿಯಾಕ್ಕೆ ಕರೆತಂದಿದ್ದರು. ಆದರೆ ಕುಡಿತದ ಚಟಕ್ಕೆ ಬಿದ್ದ ಮಗ ಕುಮಾರನಿಗೆ ಮದ್ಯ ಸಿಗದೇ ನಿದ್ದೆ ಬರದೇ ಮಾನಸಿಕ ಸ್ಥಿಮಿತ ಉಂಟಾಯಿತು. ತಂದೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಕಣ್ಣುಗಳನ್ನು ಕಿತ್ತೊಯ್ದು, ಇಡೀ ದೇಹವನ್ನು ಗಾಯಗೊಳಿಸಿ ಕೊಂದಿದ್ದಾನೆ ಎಂಬ ಮಾಹಿತಿ ಲಭಿಸಿದೆ.
ಮೃತದೇಹವನ್ನು ಜುಬೈಲ್ ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ. ಘಟನೆ ಸಂಬಂಧ ಸಾಮಾಜಿಕ ಕಾರ್ಯಕರ್ತರ ನೇತೃತ್ವದಲ್ಲಿ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ